Just In
Don't Miss!
- Sports
ಐಪಿಎಲ್ 2021: ಸಿಎಸ್ಕೆ ಉಳಿಸಿಕೊಂಡಿರುವ, ಕೈ ಬಿಟ್ಟಿರುವ ಆಟಗಾರರ ಪಟ್ಟಿ
- Automobiles
ಒಂದು ಗಂಟೆಯಲ್ಲಿ ಈ ಬುಲೆಟ್ ಥಾಲಿಯನ್ನು ತಿಂದು ಮುಗಿಸುವವರಿಗೆ ಸಿಗಲಿದೆ ಬುಲೆಟ್ ಬೈಕ್
- News
ಕೃಷಿ ಕಾಯ್ದೆಗಳ ಕಥೆ: ರೈತರಿಗೆ ಸಮಾಧಾನ ನೀಡದ "ಸಂಧಾನ" ಸಭೆಗಳ ಸಾಲು!
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪುನೀತ್ ರಾಜ್ಕುಮಾರ್ ಅನ್ನು ತೆಲುಗಿಗೆ ಸ್ವಾಗತಿಸಿದ ಬಾಹುಬಲಿ
ಈಗಿನದ್ದು ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನಾ. ಬಹುತೇಕ ಸ್ಟಾರ್ ನಟರ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗುತ್ತಿವೆ. ಇತರ ಭಾಷೆಯ ನಟರು ನೆರೆ ರಾಜ್ಯದ ಸಿನಿಮಾಗಳನ್ನು ತಮ್ಮ-ತಮ್ಮ ಭಾಷೆಗೆ ಸ್ವಾಗತಿಸುತ್ತಿದ್ದಾರೆ.
ನಟ ಪುನೀತ್ ರಾಜ್ಕುಮಾರ್ ಅವರ ಹೊಸ ಸಿನಿಮಾ 'ಯುವರತ್ನ' ಸಹ ಕನ್ನಡ ಮಾತ್ರವಲ್ಲದೆ ತೆಲುಗು ಭಾಷೆಯಲ್ಲಿಯೂ ಬಿಡುಗಡೆ ಆಗಲಿದೆ. ಈ ಸಿನಿಮಾವನ್ನು ಹಾಗೂ ನಟ ಪುನೀತ್ ರಾಜ್ಕುಮಾರ್ ಅವರನ್ನು ನಟ ಪ್ರಭಾಸ್ ತೆಲಗು ಸಿನಿರಂಗಕ್ಕೆ ಸ್ವಾಗತಿಸಿದ್ದಾರೆ.
'ಪುನೀತ್ ರಾಜ್ಕುಮಾರ್ ಅವರನ್ನು ತೆಲುಗು ಸಿನಿಮಾರಂಗಕ್ಕೆ ಸ್ವಾಗತಿಸುತ್ತಿದ್ದೇನೆ. ಯುವರತ್ನ ಸಿನಿಮಾದ ತಂಡಕ್ಕೆ ಶುಭಹಾರೈಕೆಗಳು' ಎಂದು ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು, ಯುವರತ್ನ ಸಿನಿಮಾದ ತೆಲುಗು ಭಾಷೆಯ ಹಾಡನ್ನು ಹಂಚಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್, ಪುನೀತ್ ರಾಜ್ಕುಮಾರ್ ಅವರನ್ನು ತೆಲುಗು ಸಿನಿಮಾರಂಗಕ್ಕೆ ಸ್ವಾಗತಿಸಿದ್ದರು. ವಿಶೇಷವೆಂದರೆ ಪುನೀತ್, ನಾಯಕನಾಗಿ ನಟಿಸಿದ್ದ ಮೊದಲ ಸಿನಿಮಾ ಅಪ್ಪು ನಿರ್ದೇಶಿಸಿದ್ದು ಇದೇ ಪುರಿ ಜಗನ್ನಾಥ್.
ಇದೇ ದಿನ, ವಿಜಯ್ ಕಿರಗಂದೂರು ನಿರ್ಮಾಣದ ಮುಂದಿನ ಸಿನಿಮಾ ಘೋಷಣೆ ಆಗಿದ್ದು, ಆ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ. ಸಿನಿಮಾಕ್ಕೆ ಸಲಾರ್ ಎಂದು ಹೆಸರಿಡಲಾಗಿದೆ.
ಪುನೀತ್ ರಾಜ್ಕುಮಾರ್ ಅವರೂ ಸಹ ಪ್ರಭಾಸ್ ಅನ್ನು ಕನ್ನಡಕ್ಕೆ ಸ್ವಾಗತಿಸಿ ಟ್ವೀಟ್ ಮಾಡಿದ್ದು, 'ತೆರೆದ ಹೃದಯದೊಂದಿಗೆ ನಿಮ್ಮನ್ನು ಕನ್ನಡ ನಾಡಿಗೆ ಸ್ವಾಗತಿಸುತ್ತಿದ್ದೇನೆ' ಎಂದು ಹೇಳಿದ್ದಾರೆ. ಸಾಲಾರ್ ಸಿನಿಮಾದ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ ಪುನೀತ್.