Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆಮೇಲೆ ಖತರ್ನಾಕ್ ಕೇಡಿ ಆಗಿದ್ದರೂ, ನಿಜ ಜೀವನದಲ್ಲಿ ಪ್ರಕಾಶ್ ರೈ 'ಹೀರೋ'.!
ಕನ್ನಡ, ತೆಲುಗು, ತಮಿಳು ಭಾಷೆಯ ಅನೇಕ ಚಿತ್ರಗಳಲ್ಲಿ ಖತರ್ನಾಕ್ ಕೇಡಿ ಪಾತ್ರಗಳಲ್ಲಿ ಅಭಿನಯಿಸಿರುವ ನಟ ಪ್ರಕಾಶ್ ರೈ, ನಿಜ ಜೀವನದಲ್ಲಿ ಮಾತ್ರ 'ರಿಯಲ್ ಹೀರೋ'.! ನಾವು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.
ಮೊನ್ನೆಯಷ್ಟೇ ರಂಜಾನ್ ಹಬ್ಬ ಇತ್ತಲ್ಲ... ಆ ದಿನ ಪ್ರಕಾಶ್ ರೈ ಒಂದೊಳ್ಳೆ ಕೆಲಸ ಮಾಡಿದ್ದಾರೆ. ಬಡ ಮುಸ್ಲಿಂ ಕುಟುಂಬವೊಂದರ ಮನೆಯನ್ನು ನವೀಕರಿಸಿ ಕೊಟ್ಟಿದ್ದಾರೆ ನಟ ಪ್ರಕಾಶ್ ರೈ.
ನಟ ಪ್ರಕಾಶ್ ರೈ ಜೀವನಕ್ಕೆ ಹೊಸ ತಿರುವು ನೀಡಿದ ಅದೃಷ್ಟಲಕ್ಷ್ಮಿ ಇವರೇ.!
ತೆಲಾಂಗಣದ ಕೊಂಡಾರೆಡ್ಡಿಪಲ್ಲಿ ಎಂಬ ಗ್ರಾಮವನ್ನು ನಟ ಪ್ರಕಾಶ್ ರೈ ದತ್ತು ಪಡೆದಿರುವ ಬಗ್ಗೆ ನಿಮಗೆ ಗೊತ್ತೇ ಇದೆ. ಆ ಗ್ರಾಮವನ್ನ ಅಭಿವೃದ್ಧಿ ಮಾಡಲು ಹೊರಟಿರುವ ಪ್ರಕಾಶ್ ರೈ, ಅದೇ ಗ್ರಾಮದಲ್ಲಿ ಶಿಥಿಲಾವಸ್ಥೆ ತಲುಪಿದ್ದ ಬಡ ಮುಸ್ಲಿಂ ಕುಟುಂಬವೊಂದರ ಮನೆಯನ್ನು ನವೀಕರಿಸಿ ಕೊಟ್ಟಿದ್ದಾರೆ.
ಪ್ರಕಾಶ್ ರೈ ಬಗ್ಗೆ ವಿಚ್ಛೇದಿತ ಪತ್ನಿ ಲಲಿತಾ ಕುಮಾರಿ ಹೇಳಿದ್ದೇನು.?
ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ನಟ ಪ್ರಕಾಶ್ ರೈ, ''ಪ್ರಕಾಶ್ ರಾಜ್ ಫೌಂಡೇಶನ್ ಮೂಲಕ ಕುಟುಂಬವೊಂದಕ್ಕೆ ಮನೆ ನೀಡಿ, ಸಂತೋಷವನ್ನು ಮರಳಿ ನೀಡಿ, ಕೊಂಡಾರೆಡ್ಡಿಪಲ್ಲಿಯಲ್ಲಿ ರಂಜಾನ್ ಹಬ್ಬವನ್ನು ಆಚರಿಸಿದ್ದೇನೆ'' ಎಂದು ಹೇಳಿಕೊಂಡಿದ್ದಾರೆ.
Celebrated Ramzan at #kondareddypalli by handing over home built for this family by #prakashrajfoundation .. the joy of giving back to life. pic.twitter.com/GWdqfLDJrg
— Prakash Raj (@prakashraaj) June 26, 2017
ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡರೂ, ನಿಜ ಜೀವನದಲ್ಲಿ ಇಂತಹ ಸಾಮಾಜಿಕ ಕಾರ್ಯಗಳ ಮೂಲಕ ಅನೇಕರ ಪಾಲಿಗೆ ಪ್ರಕಾಶ್ ರೈ 'ಹೀರೋ' ಆಗಿದ್ದಾರೆ.