Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂತಹ ಟೈಮಲ್ಲೂ ಹಾಸ್ಯಚಟಾಕಿ ಹಾರಿಸಿದ ಪ್ರಕಾಶ್ ರೈ
ಕರ್ನಾಟಕ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದರೇ, ಮತ್ತೊಂದೆಡೆ ಕಾಂಗ್ರೆಸ್-ಜೆಡಿಎಸ್, ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಮಾಸ್ಟರ್ ಫ್ಲ್ಯಾನ್ ಮಾಡ್ತಿದೆ.
ಈ ರೀತಿ ಚಿಂದಿ ಚಿತ್ರಾನ್ನ ಆಗಿರುವ ರಾಜ್ಯ ರಾಜಕಾರಣದ ಬಗ್ಗೆ ಪ್ರಕಾಶ್ ರೈ ಕಿಡಿಕಾರಿದ್ದಾರೆ. ಅತಂತ್ರ ಫಲಿತಾಂಶ ನೀಡಿ ದೊಂಬರಾಟ ನೋಡುವಂತಾಗಿರುವ ನಾಡಿನ ಜನತೆ ಬಗ್ಗೆ ರೈ ಆತಂಕ ವ್ಯಕ್ತಪಡಿಸಿದ್ದರು.
ಸದ್ಯದ ರಾಜಕೀಯ ಬೆಳವಣಿಗೆಯಲ್ಲಿ ರೆಸಾರ್ಟ್ ರಾಜಕಾರಣ, ಕುದರೆ ವ್ಯಾಪಾರ ಆಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಈ ನಡುವೆ ನಟ ಪ್ರಕಾಶ್ ರೈ ಟ್ವಿಟ್ಟರ್ ನಲ್ಲಿ ಹಾಸ್ಯಚಟಾಕಿ ಹಾರಿಸಿದ್ದಾರೆ.
ಪ್ರಕಾಶ್ ರೈ ಎಲ್ಲೋದ್ರು ಅಂತ ಹುಡುಕುತ್ತಿದ್ದವರು ನೋಡಿ 'ರೈ' ಬಂದ್ರು.!
Karnataka Breaking NEWS...!!! Holiday Resort managers are meeting his excellency The Governor and claiming to form the government., because they have 116 MLA s with them.. the game is open now.. everyone is resorting to politics ..
— Prakash Raj (@prakashraaj) May 17, 2018
ಕಾಂಗ್ರೆಸ್ ಶಾಸಕರು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಮತ್ತು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಈ ಬಗ್ಗೆ ಕಾಲೆಳೆದಿರುವ ಪ್ರಕಾಶ್ ರೈ ''ರೆಸಾರ್ಟ್ ಮ್ಯಾನೇಜರ್ ಸರ್ಕಾರ ರಚಿಸಲು ಅನುಮತಿ ಕೋರಿ ರಾಜ್ಯಪಾಲರ ಬಳಿ ಮನವಿ ಮಾಡಿಕೊಂಡಿದ್ದಾರೆ. ಯಾಕಂದ್ರೆ, 116 ಶಾಸಕರು ಅವರ ಜೊತೆಯಲ್ಲಿದ್ದಾರೆ. ಆಟ ಈಗ ಶುರು'' ಎಂದು ಟ್ವೀಟ್ ಮಾಡಿದ್ದಾರೆ.
ರಾಜಕೀಯ ಪಕ್ಷಗಳಿಗೆ ಇದು ಗಂಭೀರವಾಗಿದ್ರೂ, ನೋಡುಗರಿಗೆ ಇದು ಮನರಂಜನೆಯ ಬೆಳವಣಿಗೆಗಳಾಗಿದೆ. ವಾಟ್ಸಾಪ್, ಟ್ವಿಟ್ಟರ್, ಫೇಸ್ ಬುಕ್ ಗಳಲ್ಲಿ ಇಂತಹ ಟ್ರೋಲ್ ಗಳು, ಕಾಮಿಡಿ ಸಂದೇಶಗಳು ರಾಜಕೀಯ ವ್ಯಕ್ತಿಗಳ ಕಾಲೆಳೆಯುತ್ತಿದೆ.