Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಚಿತ್ರದಲ್ಲಿ ಪ್ರಕಾಶ್ ರೈಗೆ ಚಾಲೆಂಜಿಂಗ್ ಪಾತ್ರ
ತೆಲುಗು, ತಮಿಳು ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ ಕನ್ನಡದ ಪ್ರತಿಭೆ ಪ್ರಕಾಶ್ ರೈ. ಪರಭಾಷಾ ಚಿತ್ರಗಳಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿ ಪ್ರಕಾಶ್ ರೈ ಇದೀಗ ಕನ್ನಡದಲ್ಲಿ ಖಳನಟನಾಗಿ ತಮ್ಮ ಪ್ರತಿಭೆ ಪ್ರದರ್ಶಿಸಲು ಹೊರಟಿದ್ದಾರೆ. ಅವರು ನಟಿಸಿ, ನಿರ್ದೇಶಿಸಿದ ತ್ರಿಭಾಷಾ ಚಿತ್ರ 'ಒಗ್ಗರಣೆ' ಘಮಲು ಮೂರು ರಾಜ್ಯದ ಅಭಿಮಾನಿಗಳ ಮನಸ್ಸನ್ನು ಪುಳಕಗೊಳಿಸಿದೆ.
ಇದೇ ಸಂದರ್ಭದಲ್ಲಿ ಅವರು ಮತ್ತೊಂದು ಕನ್ನಡ ಚಿತ್ರಕ್ಕೆ ಸಹಿಹಾಕಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 'ಐರಾವತ' ಚಿತ್ರದಲ್ಲಿ ಖಳನಟನಾಗಿ ಕಾಣಿಸಲಿದ್ದಾರೆ ಪ್ರಕಾಶ್ ರೈ. ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ನಿರ್ಮಿಸುತ್ತಿರುವ ಚಿತ್ರ ಇದು. [ಒಗ್ಗರಣೆ ಚಿತ್ರ ವಿಮರ್ಶೆ]
ಅದಾದ ಕೂಡಲೆ ಅವರು 'ಐರಾವತ'ಏರಲಿದ್ದಾರೆ. ದರ್ಶನ್ ಅವರ ಮೂವತ್ತೇಳನೇ ಹುಟ್ಟುಹಬ್ಬದ (ಫೆಬ್ರವರಿ 16) ದಿನ 'ಐರಾವತ' ಚಿತ್ರ ಸೆಟ್ಟೇರಿದೆ. 'ಇಟ್ಸ್ ಎ ಬ್ರಾಂಡ್' ಎಂಬ ಟ್ಯಾಗ್ ಲೈನ್ ಇದಕ್ಕಿದೆ.
ದರ್ಶನ್ ಅವರ ಪ್ರಿನ್ಸ್ ಚಿತ್ರ ನಿರ್ಮಿಸಿ ಕೈಸುಟ್ಟಿಕೊಂಡಿದ್ದ ಸಂದೇಶ್ ನಾಗರಾಜ್ ಅವರು ಮತ್ತೊಮ್ಮೆ ದರ್ಶನ್ ಮೇಲೆ ನಂಬಿಕೆಯಿಟ್ಟು ಹಣ ಸುರಿಯುತ್ತಿದ್ದಾರೆ. ಅದ್ದೂರಿ ಅರ್ಜುನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದರೆ ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ ಎಂಬ ಮಾತುಗಳು ಕೇಳಿಬರುತ್ತಿವೆ.
ಎಪಿ ಅರ್ಜುನ್ ಮೇಲಿನ ಇಟ್ಟಿರುವ ಅಪಾರ ವಿಶ್ವಾಸವೇ ದರ್ಶನ್ ಈ ಚಿತ್ರದಲ್ಲಿ ಅಭಿನಯಿಸಲು ಕಾರಣ. ಇನ್ನೂ ವಯಸ್ಸಿನಲ್ಲಿ ಅರ್ಜುನ್ ಚಿಕ್ಕವರು. ದೊಡ್ಡ ದೊಡ್ಡ ಸ್ಟಾರ್ ಗಳಿಗೆ ಚಿತ್ರ ಮಾಡಕ್ಕೆ ಬರಲ್ಲ ಎಂಬ ಮಾತುಗಳು ಗಾಂಧಿನಗರದಲ್ಲಿ ಹರಿದಾಡಿದ್ದವು. ಆದರೆ ದರ್ಶನ್ ಮಾತ್ರ ಅವರ ವಯಸ್ಸನ್ನು ಗಮನಿಸದೆ ಟ್ಯಾಲೆಂಟ್ ಗಮನಿಸಿ ಐರಾವತ ಏರುತ್ತಿದ್ದಾರೆ. (ಏಜೆನ್ಸೀಸ್)