Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೋಟ್ ಬ್ಯಾನ್' ಬಗ್ಗೆ ನಟ ಪ್ರಕಾಶ್ ರೈ ನೀಡಿದ ಹೇಳಿಕೆ ಕೇಳಿ!
ನೋಟ್ ಬ್ಯಾನ್ ಆಗಿ ವರ್ಷಗಳು ಕಳೆದಿದೆ. ಅನೇಕರು ನೋಟು ನಿಷೇಧ ಮಾಡಿದ ಮೋದಿ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಈಗ ನಟ ಪ್ರಕಾಶ್ ರೈ ಕೂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ನಟ ಪ್ರಕಾಶ್ ರೈ "ಸಂಬಂಧಪಟ್ಟವರ ಗಮನಕ್ಕೆ" ಎಂಬ ಶೀರ್ಷಿಕೆ ನೀಡಿ ಅದರಲ್ಲಿ "ಶ್ರೀಮಂತರು ತಮ್ಮ ಕಪ್ಪು ಹಣವನ್ನು ಹೊಳೆಯುವ ಹೊಸ ನೋಟುಗಳಿಗೆ ಬದಲಾಯಿಸಲು ದಾರಿಗಳು ಕಂಡುಕೊಂಡರು. ಇದರಿಂದ ಹತ್ತಾರು ಲಕ್ಷ ಅಸಹಾಯಕ ಹಾಗೂ ಅಸಂಘಟಿತ ವಲಯದಲ್ಲಿರುವ ಕಾರ್ಮಿಕರ ಬದುಕು ಡೋಲಾಯಮಾನ ಆಯಿತು. ನಮ್ಮ ಕಾಲ ಘಟ್ಟದ ಅತಿ ದೊಡ್ಡ ತಪ್ಪು ನಿರ್ಣಯಕ್ಕೆ ಕ್ಷಮೆ ಕೇಳುವ ಮನಸ್ಸು ಮಾಡಿದ್ದಿರಾ?" ಎಂದು ಟ್ವೀಟ್ ಮಾಡಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.
''ನೋಟು ನಿಷೇಧ ಮಾಡಿ ಅತಿ ದೊಡ್ಡ ತಪ್ಪು ಮಾಡಿರುವ ಕೇಂದ್ರ ಸರ್ಕಾರ ದೇಶದ ಜನರ ಕ್ಷಮೆ ಕೇಳಬೇಕು'' ಎಂದು ಪ್ರಕಾಶ್ ರೈ ಒತ್ತಾಯಿಸಿದ್ದಾರೆ. ಇನ್ನು ಇತ್ತೀಚಿಗಷ್ಟೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನವಾಗಿರುವುದಕ್ಕೆ ಅವರು ನನಗಿಂತ ದೊಡ್ಡ ನಟ ಎಂದು ಪ್ರಕಾಶ್ ರೈ ಟೀಕಿಸಿದ್ದರು.
This day... that age......#justasking... pic.twitter.com/LzcphBwQkz
— Prakash Raj (@prakashraaj) November 8, 2017