Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೋಟ್ ಬ್ಯಾನ್' ಬಗ್ಗೆ ನಟ ಪ್ರಕಾಶ್ ರೈ ನೀಡಿದ ಹೇಳಿಕೆ ಕೇಳಿ!
ನೋಟ್ ಬ್ಯಾನ್ ಆಗಿ ವರ್ಷಗಳು ಕಳೆದಿದೆ. ಅನೇಕರು ನೋಟು ನಿಷೇಧ ಮಾಡಿದ ಮೋದಿ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಈಗ ನಟ ಪ್ರಕಾಶ್ ರೈ ಕೂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ನಟ ಪ್ರಕಾಶ್ ರೈ "ಸಂಬಂಧಪಟ್ಟವರ ಗಮನಕ್ಕೆ" ಎಂಬ ಶೀರ್ಷಿಕೆ ನೀಡಿ ಅದರಲ್ಲಿ "ಶ್ರೀಮಂತರು ತಮ್ಮ ಕಪ್ಪು ಹಣವನ್ನು ಹೊಳೆಯುವ ಹೊಸ ನೋಟುಗಳಿಗೆ ಬದಲಾಯಿಸಲು ದಾರಿಗಳು ಕಂಡುಕೊಂಡರು. ಇದರಿಂದ ಹತ್ತಾರು ಲಕ್ಷ ಅಸಹಾಯಕ ಹಾಗೂ ಅಸಂಘಟಿತ ವಲಯದಲ್ಲಿರುವ ಕಾರ್ಮಿಕರ ಬದುಕು ಡೋಲಾಯಮಾನ ಆಯಿತು. ನಮ್ಮ ಕಾಲ ಘಟ್ಟದ ಅತಿ ದೊಡ್ಡ ತಪ್ಪು ನಿರ್ಣಯಕ್ಕೆ ಕ್ಷಮೆ ಕೇಳುವ ಮನಸ್ಸು ಮಾಡಿದ್ದಿರಾ?" ಎಂದು ಟ್ವೀಟ್ ಮಾಡಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.
''ನೋಟು ನಿಷೇಧ ಮಾಡಿ ಅತಿ ದೊಡ್ಡ ತಪ್ಪು ಮಾಡಿರುವ ಕೇಂದ್ರ ಸರ್ಕಾರ ದೇಶದ ಜನರ ಕ್ಷಮೆ ಕೇಳಬೇಕು'' ಎಂದು ಪ್ರಕಾಶ್ ರೈ ಒತ್ತಾಯಿಸಿದ್ದಾರೆ. ಇನ್ನು ಇತ್ತೀಚಿಗಷ್ಟೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನವಾಗಿರುವುದಕ್ಕೆ ಅವರು ನನಗಿಂತ ದೊಡ್ಡ ನಟ ಎಂದು ಪ್ರಕಾಶ್ ರೈ ಟೀಕಿಸಿದ್ದರು.
This day... that age......#justasking... pic.twitter.com/LzcphBwQkz
— Prakash Raj (@prakashraaj) November 8, 2017