Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಚಂದ್ರನ್ 'ದೃಶ್ಯಂ-2'ಗೆ ಎಂಟ್ರಿ ಕೊಟ್ಟ ಕನ್ನಡದ ಖ್ಯಾತ ನಟ
ಮಲಯಾಳಂನ ಸೂಪರ್ ಹಿಟ್ ದೃಶ್ಯಂ-2 ಚಿತ್ರದ ಕನ್ನಡ ರಿಮೇಕ್ ಗೆ ಕ್ರೇಜಿ ಸ್ಟಾರ್ ರವಿಚಂದ್ರನ್ ಸಜ್ಜಾಗಿದ್ದಾರೆ. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್ ಮತ್ತೆ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
ಏಳು ವರ್ಷಗಳ ಹಿಂದೆ ತೆರೆಗೆ ಬಂದಿದ್ದ ದೃಶ್ಯಂ ಸಿನಿಮಾದ ಮುಂದುವರೆದ ಭಾಗ ಇದಾಗಿದೆ. ಮಲಯಾಳಂನಲ್ಲಿ ಈಗಾಗಲೇ ದೃಶ್ಯಂ-2 ತೆರೆಗೆ ಬಂದು ಭರ್ಜರಿ ಸಕ್ಸಸ್ ಕಂಡಿದೆ. ಸದ್ಯ ಬೇರೆ ಬೇರೆ ಭಾಷೆಗಳಿಗೆ ರಿಮೇಕ್ ಆಗುತ್ತಿದ್ದು, ಕನ್ನಡಕ್ಕು ಎಂಟ್ರಿ ಕೊಡುತ್ತಿದೆ.
ಮುಂದುವರೆಯಲಿದೆ ರಾಜೇಂದ್ರ ಪೊನ್ನಪ್ಪ ಕುತೂಹಲಕಾರಿ ಕತೆ: 'ದೃಶ್ಯ 2'ಗೆ ರವಿಚಂದ್ರನ್ ರೆಡಿ
ಮೊದಲ ಭಾಗದಲ್ಲಿ ರವಿಚಂದ್ರನ್, ನವ್ಯಾ ನಾಯರ್, ಅಚ್ಯುತ್ ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಎರಡನೇ ಭಾಗದಲ್ಲೂ ಇವರೇ ಮುಂದುವರೆಯಲಿದ್ದು, ಇನ್ನು ಕೆಲವು ಕಲಾವಿದರು ಸೇರ್ಪಡೆಯಾಗುತ್ತಿದ್ದಾರೆ. ದೃಶ್ಯಂ-2ಗೆ ಕನ್ನಡದ ಮತ್ತೊಬ್ಬ ಖ್ಯಾತ ಕಲಾವಿದ ಪ್ರಮೋದ್ ಶೆಟ್ಟಿ ಸೇರ್ಪಡೆಗೊಂಡಿದ್ದಾರೆ. ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ರಿಮೇಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಚಿತ್ರದಲ್ಲಿ ಪ್ರಮೋದ್, ಪೊಲೀಸ್ ಅಧಿಕಾರಿ ಮುರಳಿ ಗೋಪಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೃಶ್ಯಂ-2ನಲ್ಲಿ ನಟಿಸಲು ಪ್ರಮೋದ್ ಶೆಟ್ಟಿ ಸಖತ್ ಎಕ್ಸಾಯಿಟ್ ಆಗಿದ್ದಾರೆ. ಅಂದಹಾಗೆ ದೃಶ್ಯಂ-2ಗೆ ಪಿ ವಾಸು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಭಾಗ ಕೂಡ ಪಿ ವಾಸು ಸಾರಥ್ಯದಲ್ಲಿ ಮೂಡಿಬಂದಿತ್ತು.
Recommended Video
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಮುಂದಿನ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗಬೇಕಿತ್ತು. ಆದರೆ ಕೊರೊನಾ ಹಾವಳಿಯಿಂದ ಚಿತ್ರೀಕರಣ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ. ರಾಜೇಂದ್ರ ಪೊನ್ನಪ್ಪ ಆಗ ರವಿಚಂದ್ರನ್ ಮತ್ತೆ ಅಭಿಮಾನಿಗಳ ಮನ ಗೆಲ್ಲುತ್ತಾರಾ? ಮಲಯಾಳಂನಲ್ಲಿ ಸೂಪರ್ ಹಿಟ್ ಆದ ಹಾಗೆ ಕನ್ನಡದಲ್ಲೂ ದೃಶ್ಯಂ-2 ಸಕ್ಸಸ್ ಕಾಣುತ್ತಾ ಎಂದು ಕಾದುನೋಡಬೇಕು.