Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಸರ್ಜಾ, ಸುಶಾಂತ್ ಸಿಂಗ್ ನೆನಪಲ್ಲಿ ಮಾನವೀಯತೆ ಮೆರೆದ ಪ್ರಣೀತಾ
ಲಾಕ್ ಡೌನ್ ಅವಧಿಯುದ್ದಕ್ಕೂ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಪದಾರ್ಥಗಳು, ರೇಷನ್ ಮುಂತಾದವುಗಳನ್ನು ವಿತರಿಸುವ ಮೂಲಕ ಸಹಾಯ ಹಸ್ತ ಚಾಚಿ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಪ್ರಣೀತಾ ಮತ್ತೊಮ್ಮೆ ಮಾನವೀಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
Recommended Video
ಪೊಲೀಸ್ ಇಲಾಖೆಗೆ ಸ್ಯಾನಿಟೈಸರ್ಗಳು, ಆಟೋ ರಿಕ್ಷಾ ಚಾಲಕರಿಗೆ ಸುರಕ್ಷತೆ ಕಾಪಾಡಿಕೊಳ್ಳಲು ಪಾರದರ್ಶಕ ಶೀಟ್ಗಳು ಮತ್ತು ಸ್ಯಾನಿಟೈಸರ್ಗಳನ್ನು ಒದಗಿಸಿದ್ದ ಪ್ರಣೀತಾ, ತಮ್ಮ ಪ್ರಣೀತಾ ಫೌಂಡೇಷನ್ ಸಂಸ್ಥೆಯ ಮೂಲಕ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಆಹಾರ ಸಾಮಗ್ರಿಗಳನ್ನು ಪೂರೈಸಿದ್ದರು.
ಮತ್ತೆ ಶಾಲೆಗೆ ಮರಳಿದ ನಟಿ ಪ್ರಣೀತಾ ಸುಭಾಷ್
ಪ್ರಣೀತಾ ಫೌಂಡೇಷನ್ ಮೂಲಕ ಶನಿವಾರ ಮತ್ತೊಂದು ಸಮಾಜಮುಖಿ ಕಾರ್ಯ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ನೆನಪಲ್ಲಿ ಸಾಮಾನ್ಯ ಮಹಿಳೆಯರು ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ನೆರವು ನೀಡಿದ್ದಾರೆ.
'ದೇವರಿಗೆ ಹತ್ತಿರವಾಗಿರುವ ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ನೆನಪಲ್ಲಿ ಪ್ರಣೀತಾ ಫೌಂಡೇಷನ್ ತಂಡ ಶನಿವಾರ ಸಾಮಾನ್ಯ ಕುಟುಂಬಗಳ ಮಹಿಳೆಯರು, ಲೈಂಗಿಕ ಕಾರ್ಯಕರ್ತೆಯರು ಸೇರಿದಂತೆ ಅನೇಕರಿಗೆ 150ಕ್ಕೂ ಹೆಚ್ಚು ರೇಷನ್ ಕಿಟ್ಗಳು ಮತ್ತು ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸಿದೆ ಎಂದು ಪ್ರಣೀಯಾ ಹೇಳಿಕೊಂಡಿದ್ದಾರೆ.
ಸಮಾಜದಲ್ಲಿ ಸಂಕಷ್ಟದಲ್ಲಿರುವ ವರ್ಗಗಳ ಮಹಿಳೆಯರಿಗೆ ನೆರವಾಗುವ ಮೂಲಕ ಅವರನ್ನು ಮೇಲೆತ್ತುವ ಕಾರ್ಯದಲ್ಲಿ ನಿರತರಾಗಿರುವ ಸುಧಾ ಮೂರ್ತಿ ಅವರು ನನಗೆ ಪ್ರೇರಣೆ. ಅವರು ಸಾಗಿದ ಹಾದಿಯಲ್ಲಿ ಒಂದಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡುವ ಬಯಕೆ ನನ್ನದು ಎಂದು ಪ್ರಣೀತಾ ತಿಳಿಸಿದ್ದಾರೆ.