Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 1 ಲಕ್ಷ ನೆರವು ನೀಡಿದ ಪ್ರಣಿತಾ ಸುಭಾಷ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ ಮನೆ ಮನೆಗೆ ತಲುಪಿ ಜನರಿಂದ ದೇಣಿಗೆ ಸಂಗ್ರಹಿಸಲು ರಾಮಮಂದಿರ ಟ್ರಸ್ಟ್ ನಿರ್ಧರಿಸಿದೆ.
ಕರ್ನಾಟಕದಲ್ಲಿ ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಿಸುತ್ತಿದ್ದು, ಕನ್ನಡ ನಟಿ ಪ್ರಣಿತಾ ಸುಭಾಷ್ ನೆರವು ನೀಡಿದ್ದಾರೆ. ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಒಂದು ಲಕ್ಷ ರೂಪಾಯಿ ನೆರವು ಘೋಷಿಸಿರುವ ನಟಿ, ''ಎಲ್ಲರೂ ಕೈ ಜೋಡಿಸಿ'' ಎಂದು ಮನವಿ ಮಾಡಿದ್ದಾರೆ.
ಹತ್ತನೇ ತರಗತಿಯಲ್ಲಿ ಎಷ್ಟು ಅಂಕ ಗಳಿಸಿದ್ದಾರೆ ಗೊತ್ತೆ ನಟಿ ಪ್ರಣಿತಾ ಸುಭಾಷ್
ಈ ಕುರಿತು ಟ್ವಿಟ್ಟರ್ನಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ಪ್ರಣಿತಾ ಸುಭಾಷ್ ''ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ ನೀಡಿದ್ದೇನೆ. ನೀವೆಲ್ಲರೂ ಕೈಜೋಡಿಸಿ ಈ ಐತಿಹಾಸಿಕ ಅಭಿಯಾನದಲ್ಲಿ ಭಾಗಿಯಾಗಿ'' ಎಂದು ವಿನಂತಿಸಿದ್ದಾರೆ.
ಅಂದ್ಹಾಗೆ, ರಾಜ್ಯದಲ್ಲಿ ಜನವರಿ 15 ರಿಂದ ಫೆಬ್ರವರಿ 27ರವರೆಗೂ ವಿಶ್ವ ಹಿಂದೂ ಪರಿಷತ್ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡಲಿದೆ. ತಲಾ 5 ಮಂದಿಯನ್ನು ಒಳಗೊಂಡ ವಿಎಚ್ಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿಹಣ ಸಂಗ್ರಹಿಸಲಿದ್ದಾರೆ ಎಂದು ಕೇಂದ್ರಿಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಡಿ ಮಾಹಿತಿ ನೀಡಿದ್ದರು.
ಪ್ರಣಿತಾ ಸುಭಾಷ್ರ ಮೆಚ್ಚಿನ ನಟ ಹಾಗೂ ಮೆಚ್ಚಿನ ಕನ್ನಡದ ನಟ ಯಾರು?
ಪ್ರಣಿತಾ ಸುಭಾಷ್ ಅವರ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ರಾಮನ ಅವತಾರ ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ. ಬಾಲಿವುಡ್ನಲ್ಲಿ ಭುಜ್:ಪ್ರೈಡ್ ಆಫ್ ಇಂಡಿಯಾ ಸಿನಿಮಾದಲ್ಲು ಕಾಣಿಸಿಕೊಂಡಿದ್ದಾರೆ. ಹಂಗಾಮ 2 ಚಿತ್ರದಲ್ಲೂ ನಟಿಸುತ್ತಿದ್ದಾರೆ.
Recommended Video