Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇಶದ ಒಳಗೂ ವೈರಿಗಳಿದ್ದಾರೆ: 'ಹಿಂದೂ ಭಯೋತ್ಪಾದನೆ' ಎಂದವರ ಬಗ್ಗೆ ಪ್ರಣಿತಾ ಕಿಡಿ
ಅಫ್ಘಾನ್ ಬೆಳೆವಣಿಗೆ ಕುರಿತಂತೆ ದೇಶದ ಒಳಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಅಫ್ಘಾನಿಸ್ತಾನದಲ್ಲಿನ ಜನಗಳ ಬಗ್ಗೆ ಕಾಳಜಿ ವಹಿಸಿ ಸಿನಿಮಾ ಸೆಲೆಬ್ರಿಟಿಗಳು ಮರುಕ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಫ್ಘಾನ್ ಉದಾಹರಣೆಯಾಗಿ ತೆಗೆದುಕೊಂಡು ಯಾವುದೇ ಧರ್ಮದ ಕರ್ಮಠ ಧರ್ಮವಾದಿಗಳು ಯಾವ ದೇಶಕ್ಕೂ ಹಿತವಲ್ಲ ಎನ್ನುತ್ತಾ ಆರ್ಎಸ್ಎಸ್ ಅನ್ನು ಉದಾಹರಣೆಯಾಗಿ ನೀಡಿ 'ಹಿಂದು ಭಯೋತ್ಪಾದನೆ' ಶಬ್ದಗಳನ್ನು ಬಳಸುತ್ತಿದ್ದಾರೆ. ಇದು ಹಲವರನ್ನು ಕೆರಳಿಸಿದೆ.
ಈ ಬಗ್ಗೆ ಕನ್ನಡದ ನಟಿ ಪ್ರಣಿತಾ ಸುಭಾಷ್ ಟ್ವೀಟ್ ಮಾಡಿದ್ದು, ಅಫ್ಘಾನ್ ಅನ್ನು ಉದಾಹರಣೆಯನ್ನಾಗಿರಿಸಿಕೊಂಡು 'ಹಿಂದು ಭಯೋತ್ಪಾದನೆ' ಬಗ್ಗೆ ಮಾತನಾಡುತ್ತಿರುವವರನ್ನು ಗುರಿಯಾಗಿಸಿ ಕಠುವಾದ ಮಾತುಗಳನ್ನು ಪ್ರಣಿತಾ ಸುಭಾಷ್ ಟ್ವಿಟ್ಟರ್ನಲ್ಲಿ ಆಡಿದ್ದಾರೆ.
''ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ಉದಾಹರಣೆಯಾಗಿ ನೀಡುತ್ತಾ 'ಹಿಂದೂ ಭಯೋತ್ಪಾದನೆ' ವಾದವನ್ನು ಕೆಲವರು ಮುಂದಿಡುತ್ತಿದ್ದಾರೆ. 'ಹಿಂದು ಭಯೋತ್ಪಾದನೆ' ಎಂಬ ತಮ್ಮ ಕಲ್ಪನೆಯನ್ನು ಸಾರ್ವಜನಿಕಗೊಳಿಸುವ ಯತ್ನ ಮಾಡುತ್ತಿದ್ದಾರೆ. ಭಾರತ ದೇಶವು ಎಚ್ಚರಿಕೆಯಿಂದರಬೇಕು, ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ದೇಶದ ಒಳಗೂ ಇದ್ದಾರೆ'' ಎಂದಿದ್ದಾರೆ ಪ್ರಣಿತಾ.
ಪ್ರಣಿತಾ ಟ್ವೀಟ್ಗೆ ಬೆಂಬಲ
ಪ್ರಣಿತಾರ ಈ ಟ್ವೀಟ್ ಅನ್ನು ಹಲವರು ಹಂಚಿಕೊಂಡಿದ್ದಾರೆ. ಪ್ರಣಿತಾ ಧೈರ್ಯವಾಗಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ. 'ಎಡಪಂಥೀಯರಿಗೆ ತಕ್ಕುದಾದ ಉತ್ತರ ನೀಡಿದ್ದೀರಿ' ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಒಟ್ಟಾರೆಯಾಗಿ ಪ್ರಣಿತಾರ ಈ ಟ್ವೀಟ್ಗೆ ಬಹಳ ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. 'ಮುಸ್ಲಿಂ ಭಯೋತ್ಪಾದನೆ' ವಿಷಯವನ್ನು ಮರೆಮಾಚಲು 'ಹಿಂದು ಭಯೋತ್ಪಾದನೆ' ಪದ ಬಳಸಲಾಗುತ್ತಿದೆ'' ಎಂದು ಸಹ ಕೆಲವರು ಪ್ರಣಿತಾ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಹಿಂದೆಯೂ ಟ್ವೀಟ್ ಮಾಡಿದ್ದ ಪ್ರಣಿತಾ
ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪ್ರಣಿತಾ ಸಾಮಾಜಿಕ ಜೀವನದಲ್ಲಿಯೂ ಬಹಳ ಸಕ್ರಿಯರಾಗಿದ್ದಾರೆ. ಈ ಹಿಂದೆ ಕೊರೊನಾ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ ಪ್ರಣಿತಾ, ಸೂಕ್ಷ್ಮ ವಿಷಯಗಳ ಬಗ್ಗೆಯೂ ಅಳುಕಿಲ್ಲದೆ ತಮ್ಮ ಅಭಿಪ್ರಾಯ ಹೇಳುತ್ತಿರುತ್ತಾರೆ. ಬಾಬ್ರಿ ಮಸೀದಿ ತೀರ್ಪು ಬಂದಾಗ ಟ್ವೀಟ್ ಮಾಡಿದ್ದ ಪ್ರಣಿತಾ, ''ಕರಸೇವಕರ ಮೇಲೆ ಪೊಲೀಸ್ ತಂಡ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು. ರಾಜಕೀಯ ನಾಯಕರನ್ನು ಬಂಧಿಸಿದಾಗ ಕಾನೂನಿನ ನಿಯಮ ಎಲ್ಲಿತ್ತು?, ಕ್ಷಮಿಸಿ ಆದರೆ ಮರೆಯಬೇಡಿ'' ಎಂದು ಟ್ವೀಟ್ ಮಾಡಿದ್ದರು. ಡಿಜೆ ಹಳ್ಳಿ ಪ್ರಕರಣವಾದಾಗಲೂ ಟ್ವೀಟ್ ಮಾಡಿದ್ದ ಪ್ರಣಿತಾ, ''ಡಿ.ಜೆ.ಹಳ್ಳಿಯಲ್ಲಿ ನಿನ್ನೆ ನಡೆದ ಘಟನೆಗಳನ್ನು ನಾನು ಖಂಡಿಸುತ್ತೇನೆ. ಪೊಲೀಸ್ ಸ್ಟೇಷನ್ ಹಾಗು ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡನಾರ್ಹ!' ಎಂದು ಘಟನೆಯನ್ನು ವಿರೋಧಿಸಿದ್ದರು.
ಕನ್ನಡ ಶಾಲೆ ಉಳಿಸುವ ಅಭಿಯಾನಕ್ಕೆ ಜೊತೆ
ಪ್ರಣೀತಾ ಫೌಂಡೇಶನ್ ನಡೆಸುತ್ತಿರುವ ನಟಿ ಪ್ರಣಿತಾ ಫೌಂಡೇಶನ್ ಮುಖಾಂತರ ಸಾಕಷ್ಟು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಕನ್ನಡ ಶಾಲೆಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಪ್ರಣಿತಾ ಶಾಲೆ ಉಳಿವಿನ ಅಭಿನಯಾನಕ್ಕೆ ಕೈ ಜೋಡಿಸಿದ್ದಾರೆ. ಇತ್ತೀಚೆಗಷ್ಟೆ ನಟ ವಿಷ್ಣುವರ್ಧನ ಕಲಿತ ಶಾಲೆ ಸಂಕಷ್ಟಕ್ಕೆ ಸಿಲುಕಿದ್ದಾಗ ವಿಷ್ಣುವರ್ಧನ್ ಕಲಿತ ಶಾಲೆ ಉಳಿಸುವಂತೆ ಮನವಿ ಮಾಡಿದ್ದರು. ಕೋವಿಡ್ ಸಂಕಷ್ಟ ಸಮಯದಲ್ಲಿ ಸಾಕಷ್ಟು ನೆರವಿನ ಹಸ್ತವನ್ನು ಈ ನಟಿ ಚಾಚಿದ್ದರು.
ಪ್ರಣಿತಾ ನಟನೆಯ ಹಿಂದಿ ಸಿನಿಮಾಳು ಬಿಡುಗಡೆ
ದರ್ಶನ್ ಅಭಿಯನದ 'ಪೋಕಿರಿ' ಸಿನಿಮಾದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ಪ್ರಣಿತಾ, ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ. ಪ್ರಣಿತಾ ನಟಿಸಿರುವ ಹಿಂದಿ ಸಿನಿಮಾ 'ಭುಜ್' ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಗಳಿಸಿದೆ. ಪ್ರಣಿತಾ ನಟಿಸಿದ್ದ ಮತ್ತೊಂದು ಹಿಂದಿ ಸಿನಿಮಾ 'ಹಂಗಾಮಾ 2' ಸಹ ಕೆಲವೇ ದಿನಗಳ ಹಿಂದೆ ಬಿಡುಗಡೆ ಅಗಿತ್ತು. ಪ್ರಣಿತಾ ಸದ್ಯಕ್ಕೆ ಕನ್ನಡದ 'ರಾಮನ ಅವತಾರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಮೇ ತಿಂಗಳಲ್ಲಿ ಪ್ರಣಿತಾ ಉದ್ಯಮಿ ನಿತಿನ್ ರಾಜಾ ಎಂಬುವರೊಟ್ಟಿಗೆ ಸರಳವಾಗಿ ವಿವಾಹವಾಗಿದ್ದಾರೆ.