Don't Miss!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗಸ್ತ್ಯ ಶ್ರೀಮುರಳಿ ಜೊತೆಗೆ 'ಉಗ್ರಂ' ಡೈರೆಕ್ಟರ್
ನಟ ಶ್ರೀಮುರಳಿ ಬದುಕು ಬದಲಿಸಿದ ಸಿನಿಮಾ 'ಉಗ್ರಂ'. ಈ ಸಿನಿಮಾದ ನಿರ್ದೇಶಕ ಪ್ರಶಾಂತ್ ನೀಲ್. ಇದೀಗ 'ಉಗ್ರಂ' ಡೈರೆಕ್ಟರ್ ಪ್ರಶಾಂತ್ ನೀಲ್ ಶ್ರೀ ಮುರಳಿ ಭೇಟಿ ಮಾಡಿ ಶುಭಾಶಯ ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿ 'ಕೆಜಿಎಫ್ 2' ಸಿನಿಮಾದ ಚಿತ್ರೀಕರಣ ಮುಗಿಸಿರುವ ಪ್ರಶಾಂತ್ ನೀಲ್ ಬೆಂಗಳೂರಿಗೆ ಇತ್ತೀಚಿಗಷ್ಟೆ ಬಂದಿದ್ದಾರೆ. ಇದೀಗ ನಟ ಶ್ರೀ ಮುರಳಿ ಭೇಟಿ ಮಾಡಿ, 'ಭರಾಟೆ' ಸಿನಿಮಾ ಗೆಲ್ಲಲಿ ಎಂದು ವಿಶ್ ಮಾಡಿದ್ದಾರೆ.
Recommended Video
ಈ ವಾರ 'ಭರಾಟೆ' ಜೊತೆ ಬರ್ತಿದೆ ಮತ್ತೆರಡು ಕನ್ನಡ ಸಿನಿಮಾ
ಶ್ರೀಮುರಳಿ ನಟನೆಯ 'ಭರಾಟೆ' ಸಿನಿಮಾ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ಚೇತನ್ ಕುಮಾರ್ ಹ್ಯಾಟ್ರಿಕ್ ಸಿನಿಮಾ ಇದಾಗಿದೆ. 'ಮಫ್ತಿ' ನಂತರ ಶ್ರೀಮುರಳಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. 'ಕಿಸ್' ಬೆಡಗಿ ಶ್ರೀಲೀಲಾ ಸಿನಿಮಾದ ನಾಯಕಿಯಾಗಿದ್ದಾರೆ. ಮೊದಲ ಬಾರಿಗೆ ಸಹೋದರರಾದ ಸಾಯಿ ಕುಮಾರ್, ರವಿಶಂಕರ್ ಹಾಗೂ ಅಯ್ಯಪ್ಪ ಒಟ್ಟಿಗೆ ನಟಿಸಿದ್ದಾರೆ.
ನರ್ತಕಿ ಚಿತ್ರಮಂದಿರ ಸೇರಿದಂತೆ ರಾಜ್ಯಾದಂತ್ಯ ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿದೆ. ಚೇತನ್ ಕುಮಾರ್ ಎಂದಿನಂತೆ ಆಕ್ಷನ್, ಲವ್ ಹಾಗೂ ಫ್ಯಾಮಿಲಿ ಸೆಂಟಿಮೆಂಟ್ ಮೇಲೆ ಸಿನಿಮಾ ಮಾಡಿದ್ದಾರೆ. ಟ್ರೇಲರ್ ಪಕ್ಕಾ ಕಮರ್ಷಿಯಲ್ ಆಗಿದೆ. ಸುಪ್ರೀತ್ ಸಿನಿಮಾದ ನಿರ್ಮಾಣ ಮಾಡಿದ್ದಾರೆ.
'ಕೆಜಿಎಫ್ 2' ಸಿನಿಮಾದ ನಂತರ ಶ್ರೀಮುರಳಿ ಜೊತೆಗೆ ಪ್ರಶಾಂತ್ ನೀಲ್ 'ಉಗ್ರಂ ವಿರಂ' ಸಿನಿಮಾ ಮಾಡುವ ಸಾಧ್ಯತೆ ಇದೆ.