Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಅಷ್ಟೇ ಅಲ್ಲ ನಿಜವಾಗಿಯೂ 'MLA' ಆಗ್ತಾರಂತೆ ಪ್ರಥಮ್
ರಿಯಾಲಿಟಿ ಶೋ ನಿಂದ ಪ್ರಖ್ಯಾತಿ ಪಡೆದುಕೊಂಡ ನಟ ಹಾಗೂ ನಿರ್ದೇಶಕ ಪ್ರಥಮ್ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚಿಗಷ್ಟೇ ದೀಪಕ್ ರಾವ್ ಮನೆಗೆ ಭೇಟಿ ನೀಡಿದ್ದ ಪ್ರಥಮ್ ಈಗ ರಾಜಕೀಯಕ್ಕೆ ಬರುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.
ಪ್ರಥಮ್ ಅವರ ಸ್ವಂತ ಊರಾದ ಹನೂರನ್ನ ತಾಲ್ಲೂಕು ಎಂದು ಘೋಷಣೆ ಆಗಿರುವ ಸಂದರ್ಭದಲ್ಲಿ ಸಿ ಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಎಂ ಎಲ್ ಎ ಸಿನಿಮಾದಲ್ಲಿ ಅಭಿನಯಿಸುವುದು ಮಾತ್ರವಲ್ಲ ನಿಜ ಜೀವನದಲ್ಲೂ ಎಂ ಎಲ್ ಎ ಆಗುವ ಆಸೆಯನ್ನ ಪ್ರಥಮ್ ವ್ಯಕ್ತ ಪಡಿಸಿದ್ದಾರೆ.
ತಮ್ಮ ಫೇಸ್ ಬುಕ್ ನಲ್ಲಿ "Love u siddu boss ಹೊಸ ತಾಲೂಕ್ಕಿನ ಹೊಸ MLA ನಾನಾಗ್ಬೇಕು ಅಂತ ತುಂಬಾ ಆಸೆ ಇದೆ. ದಯವಿಟ್ಟು ನಿಮ್ಮ ಪಕ್ಷದಿಂದ ಯಾರಿಗೂ ಟಿಕೇಟ್ ಕೊಡ್ಬೇಡಿ. ಕೊಟ್ರೂ ಅವರು ಗೆಲ್ಲೋದು ಕಷ್ಟ. ಹೆಂಗೋ ಈ ಸಲ ಎಲೆಕ್ಷನ್ ಲಿ ಬೇರೆ ಪಕ್ಷದಿಂದನೋ, ಅಥವಾ independent ಆಗೋ ನಿಂತ್ಕೊಂಡು ಗೆದ್ರೂ ಗೆದ್ದು ಬಿಡ್ತೀನಿ. ಹೊಸ ತಾಲ್ಲೂಕಿನ ಹೊಸ MLA ನಾನೇ ಆಗ್ತೀನಿ. ಜೊತೆಗೆ ಕೆಲಸನೂ ಮಾಡ್ತೀನಿ. ಪ್ಲೀಸ್ ಮನಸ್ಸು ಮಾಡಿ ಬಾಸ್" ಎಂದು ಬರೆದಿದ್ದಾರೆ.
ಸದ್ಯ ಏಳು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಪ್ರಥಮ್ ರಾಜಕೀಯದಲ್ಲೂ ತಮ್ಮನ್ನ ತೊಡಗಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಸಿ ಎಂ ಅವರ ಬಳಿ ಟಿಕೇಟ್ ಕೇಳುವುದರ ಜೊತೆಗೆ ನೀವು ಟಿಕೇಟ್ ಕೊಟ್ಟಿಲ್ಲ ಅಂದರೂ ಸ್ವತಂತ್ರವಾಗಿ ಚುನಾವಣೆಗೆ ನಿಂತು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.