Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಚಂದನ್ ಮಾಡಿರುವುದರಲ್ಲಿ ತಪ್ಪೇನಿಲ್ಲ'' - ಪ್ರತಾಪ್ ಸಿಂಹ ಹೇಳಿಕೆ
''ಚಂದನ್ ಶೆಟ್ಟಿ ಮಾಡಿರುವುದರಲ್ಲಿ ತಪ್ಪೇನಿದೆ'' ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಯುವ ದಸರಾದಲ್ಲಿ ಆದ ಲವ್ ಪ್ರಪೋಸ್ ಘಟನೆಯ ಬಗ್ಗೆ ಪ್ರತಾಪ್ ಸಿಂಗ್ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಯುವ ದಸರಾ ವೇದಿಕೆ ಮೇಲೆ ನಿವೇದಿತಾಗೆ ಪ್ರೇಮ ನಿವೇದನೆ ಮಾಡಿದ ಚಂದನ್ ಶೆಟ್ಟಿ ದೊಡ್ಡ ವಿವಾದಕ್ಕೆ ಕಾರಣ ಆಗಿದ್ದಾರೆ. ಒಂದು ಸರ್ಕಾರಿ ಕಾರ್ಯಕ್ರಮವನ್ನು ತಮ್ಮ ವೈಯಕ್ತಿಕ ಕಾರ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ವಿರೋಧ ವ್ಯಕ್ತವಾಗಿದೆ.
'ಇದು ಎಂಗೇಜ್ ಮೆಂಟ್ ಅಲ್ಲ': ಲವ್ ಪ್ರಪೋಸ್ ಕುರಿತು ಚಂದನ್ ಶೆಟ್ಟಿ ಸ್ಪಷ್ಟನೆ
ಸೋಷಿಯಲ್ ಮೀಡಿಯಾದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಅನೇಕರು ಅಸಮಾಧಾನ ವ್ಯಕ್ತಿಪಡಿಸುತ್ತಿದ್ದಾರೆ. ಟ್ರೋಲ್ ಗಳು ಸಂಖ್ಯೆ ಕೂಡ ವಿಪರಿತವಾಗಿದೆ. ಮೈಸೂರು ಉಸ್ತುವಾರಿ ಸಚಿವ ಸೋಮಣ್ಣ ಸಹ ಆಕ್ರೋಶ ಹೊರ ಹಾಕಿದ್ದರು. ಹೀಗಿರುವಾಗ, ಮೈಸೂರು ಸಂಸದ ಪ್ರತಾಪ್ ಸಿಂಗ್ ಪ್ರೇಮಿಗಳ ಪರ ನಿಂತಿದ್ದಾರೆ.
ಯುವ ಜೋಡಿಗಳ ಜೊತೆ ನಿಂತ ಸಂಸದ
ಯುವ ದಸರಾದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಲವ್ ಪ್ರಪೋಸ್ ಘಟನೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಯುವ ಜೋಡಿಗಳ ಪರ ಮಾತನಾಡಿರುವ ಅವರು, ''ನೀವು ಮಾಡಿರುವುದರಲ್ಲಿ ತಪ್ಪೇನಿಲ್ಲ'' ಎಂದು ಹೇಳಿದ್ದಾರೆ. ಸುದ್ದಿವಾಹಿನಿಗೆ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ ಸೋಮಣ್ಣ ಹೇಳಿಕೆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
ಯುವ ದಸರಾದಲ್ಲಿ ಚಂದನ್ ಎಡವಟ್ಟು : ನಿವೇದಿತಾ ತಾಯಿ ಹೇಳಿದ್ದೇನು?
ಸೋಮಣ್ಣ ಮಾತಿನ ಅರ್ಥ ಹಾಗಲ್ಲ
''ನಿಜವಾಗಿಯೂ ಇದು ಬುದ್ದಿ ಇಲ್ಲದ ಜನ ಮಾಡುವ ಕೆಲಸ. ಅವರು ಮಾಡಿರುವುದು ಅಪರಾಧ. ಇದು ಹುಡುಗಾಟ ಅಲ್ಲ. ಚಂದನ್ ಶೆಟ್ಟಿ ವಿರುದ್ಧ ಪೋಲೀಸರ ಕ್ರಮ ತೆಗೆದುಕೊಳ್ಳುತ್ತಾರೆ.'' ಎಂದು ಸೋಮಣ್ಣ ಹೇಳಿದ್ದರು. ಈ ಮಾತುಗಳಿನ ಅರ್ಥ ಹೇಳಿದ ಪ್ರತಾಪ್ ಸಿಂಹ ''ಆರು ತಿಂಗಳಿನ ಒಳಗೆ ಮದುವೆ ಆಗಲಿ ಎನ್ನುವುದು ಸೋಮಣ್ಣ ಅವರ ಆಸೆ. ಅವರ ಮಾತನ್ನು ಬೇರೆ ರೀತಿಯಲ್ಲಿ ತೆಗೆದುಕೊಳ್ಳಬೇಡಿ ಎಂದು ತಿಳಿಸಿದ್ದಾರೆ.
ಮೊದಲ ಹೆಜ್ಜೆಯಲ್ಲಿ ವಿರೋಧ ಎದುರಿಸಬೇಕಾಗಿದೆ 'ಬಿಗ್ ಬಾಸ್' ಪ್ರೇಮ ಪಕ್ಷಿಗಳು
ನೀವು ನನಗೆ ಕ್ಷಮೆ ಕೇಳಬೇಡಿ
''ನಿನ್ನೆ ಕಾರ್ಯಕ್ರಮದಲ್ಲಿ ಮೊದಲೇ ಹೇಳಿದ್ದರೆ, ನಾನೇ ವೇದಿಕೆ ಮೇಲೆ ಬಂದು ನಿಮಗೆ ಬೊಕ್ಕೆ ನೀಡಿ ಅಭಿನಂದಿಸುತ್ತಿದ್ದೆ. ಸೋಷಿಯಲ್ ಮೀಡಿಯಾದಲ್ಲಿ ಏನೇ ಮಾಡಿದರೂ ಟೀಕೆ ಬರುತ್ತದೆ. ಇದು ನಿಮಗೆ ಹೊಸತು ಇರಬೇಕು, ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ನೀವು ಕ್ಷಮೆ ಕೇಳಬೇಡಿ. ಯಂಗ್ ಜನರೇಷನ್ ಭಾವನೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜಕ್ಕೆ ಕೂಡ ಕೆಲವು ಭಾರಿ ಆಗುವುದಿಲ್ಲ.'' ಎಂದಿದ್ದಾರೆ.
ಅಭಿಮಾನಿಗಳ ಮುಂದೆ ಎಂಗೇಜ್ ಆದ ಚಂದನ್ ಶೆಟ್ಟಿ - ನಿವೇದಿತಾ ಗೌಡ : ಸದ್ಯದಲ್ಲೇ ಮದುವೆ
ಪರ ವಿರೋಧ ಮಾತುಗಳು
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಲವ್ ಪ್ರಪೋಸ್ ಘಟನೆಗೆ ಪರ ವಿರೋಧ ಮಾತುಗಳಿಗೆ ಕೇಳಿಬರುತ್ತಿವೆ. ಚಂದನ್ ಮಾಡಿದ್ದು ತಪ್ಪು ಎಂದು ಹಲವರು ಹೇಳುತ್ತಿದ್ದಾರೆ. ಕೆಲವರು ಚಂದನ್ ಕ್ಷಮೆ ಕೇಳಿದ ಮೇಲೆ ಇದನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಚಂದನ್ ಇದು ಎಂಗೇಜ್ ಮೆಂಟ್ ಅಲ್ಲ ಲವ್ ಪ್ರಪೋಸ್ ಅಷ್ಟೇ ಎಂದಿದ್ದಾರೆ.