Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೂರಿಕಟ್ಟೆಯಲ್ಲಿ ರಹಸ್ಯ ಬೇಧಿಸಲು ಹೊರಟ ನಟ ಪ್ರವೀಣ್
ಚೌಕಾಬಾರ ಎನ್ನುವ ಕಿರುಚಿತ್ರವನ್ನ ಡೈರೆಕ್ಟ್ ಮಾಡಿ ಪ್ರಶಸ್ತಿ ಪಡೆದುಕೊಂಡಿದ್ದ ನಿರ್ದೇಶಕ ರಾಘು ಶಿವಮೊಗ್ಗ ಹೊಸ ಕತೆಯ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಚೂರಿಕಟ್ಟೆ ಚಿತ್ರವನ್ನ ನಿರ್ದೇಶನ ಮಾಡಿರುವ ರಾಘು ಇದೇ ವಾರ ಚಿತ್ರವನ್ನ ತೆರೆಗೆ ತರುವುದಕ್ಕೆ ಸಿದ್ದತೆ ನಡೆಸಿದ್ದಾರೆ. 'ಸಿಂಪಲ್ ಆಗ್ ಇನ್ನೋಂದ್ ಲವ್ ಸ್ಟೋರಿ' ಚಿತ್ರದಲ್ಲಿ ಲವ್ವರ್ ಬಾಯ್ ಆಗಿ ಅಭಿನಯಿಸಿದ್ದ ಪ್ರವೀಣ್ ತೇಜ್ ಚೂರಿಕಟ್ಟೆಯ ರಹಸ್ಯ ಬಯಲು ಮಾಡಲಿರುವ ನಾಯಕ.
ಚೂರಿಕಟ್ಟೆ ಮೇಕಿಂಗ್ ಟೀಸರ್ ಮತ್ತು ಹಾಡುಗಳಿಂದ ಸಾಕಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿರುವ ಸಿನಿಮಾ. ಚಿತ್ರದಲ್ಲಿ ನಟ ಪ್ರವೀಣ್ ತೇಜ್ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಚೂರಿಕಟ್ಟೆ ಮೇಕಿಂಗ್ ಬಗ್ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
ಮಾರ್ನಿಂಗ್ ಸ್ಟಾರ್ ಪಿಚ್ಚರ್ಸ್ ಲಾಂಛನದಲ್ಲಿ ಎಸ್ ನಯಾಜುದ್ದೀನ್ ಹಾಗೂ ಎಸ್ ತುಳಸಿರಾಮುಡು ಸಿನಿಮಾವನ್ನ ನಿರ್ಮಾಣ ಮಾಡಿದ್ದಾರೆ. 'ರಾಮಾ ರಾಮಾ ರೇ' ಖ್ಯಾತಿಯ ವಾಸುಕಿ ವೈಭವ್ ಚೂರಿಕಟ್ಟೆ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ನಟಿ ಪ್ರೇರಣಾ ನಾಯಕಿ ಆಗಿ ಅಭಿನಯಿಸಿದರೆ, ಅಚ್ಚುತ್ ಕುಮಾರ್, ಶರತ್ ಲೋಹಿತಾಶ್ವ ಇನ್ನೂ ಅನೇಕ ಕಲಾವಿದರು ಸಿನಿಮಾದಲ್ಲಿ ಇದ್ದಾರೆ.
ಟಿಂಬರ್ ಮಾಫಿಯಾ ಬಗ್ಗೆ ಕಥೆಯನ್ನ ಎಣೆಯಲಾಗಿದ್ದು ಇದರ ಮಧ್ಯೆ ಸುಂದರವಾದ ಪ್ರೇಮಕತೆಯೂ ಚಿತ್ರದಲ್ಲಿದೆ. ಅದ್ವೈತ್ ಅವರ ಸಿನಿಮಾಟೋಗ್ರಫಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು ಗಣರಾಜ್ಯೋತ್ಸವ ವಿಶೇಷವಾಗಿ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
ನಟ ಪ್ರವೀಣ್ ತೇಜ್ ಅವರ ಹಿಂದಿನ ಸಿನಿಮಾ ನೋಡಿರುವ ಪ್ರೇಕ್ಷಕರು ಚೂರಿಕಟ್ಟೆಯಲ್ಲಿ ಪ್ರವೀಣ್ ಅವರನ್ನ ಬೇರೆಯದ್ದೇ ಪಾತ್ರದಲ್ಲಿ ಕಾಣಬಹುದಾಗಿದೆ. ಕನಕ ಚಿತ್ರ ಜೊತೆಯಾಗಿ ಚೂರಿಕಟ್ಟೆ ತೆರೆ ಕಾಣುತ್ತಿದೆ. ಮೇಕಿಂಗ್ ಮತ್ತು ಹಾಡುಗಳನ್ನ ನೋಡಿದರೆ ಚಿತ್ರ ಕೂಡ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗುವ ಎಲ್ಲಾ ಲಕ್ಷಣಗಳು ಇವೆ.