Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದು ಪ್ರೇಮಿಗಳ ಪ್ರೀತಿ ಗೀತಿ ಇತ್ಯಾದಿಗಳ ವಿಷಯ
ಇದೇ ಮೊದಲ ಬಾರಿಗೆ ಬಣ್ಣಹಚ್ಚಿರುವ ಪವನ್ ಒಡೆಯರ್ ನಾಯಕ ನಟನಾಗಿ ಪ್ರೀತಿ ಗೀತಿ ಇತ್ಯಾದಿ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರಕ್ಕೆ ಸಂಭಾಷಣೆ, ನಿರ್ದೇಶನವನ್ನು ವೀರೇಂದ್ರ ಅವರದು. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.
ಪವನ್ ಒಡೆಯರ್ ಚೊಚ್ಚಲ ಅಭಿನಯ, ಇನ್ನೊಂದು ಕಡೆ ವೀರೇಂದ್ರ ಅವರ ಮೊದಲ ನಿರ್ದೇಶನ. ಇವರಿಬ್ಬರ ಕಾಂಬಿನೇಷನ್ ಎಷ್ಟರ ಮಟ್ಟಿಗೆ ವರ್ಕ್ ಔಟ್ ಆಗಿದೆ ಎಂಬುದು ಇದೇ ಜೂ.13ರಂದು ಗೊತ್ತಾಗಲಿದೆ. ಕಾರಣ ಪ್ರೀತಿ ಗೀತಿ ಇತ್ಯಾದಿ ಅಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ. [ಪವರ್ ಸ್ಟಾರ್ 'ರಣ ವಿಕ್ರಮ' ಥ್ರಿಲ್ಲಿಂಗ್ ಡೀಟೇಲ್ಸ್]
ಮತ್ತೊಬ್ಬ ಯೋಗರಾಜ್ ಭಟ್ ಅವರ ಶಿಷ್ಯ ವೀರೇಂದ್ರ ನಿರ್ದೇಶಕ ಪವನ್ ವಡೆಯರ್ ಅವರನ್ನು ಈ ಸಿನೆಮಾದಲ್ಲಿ ಬಾರ್ ಒಂದರಲ್ಲಿ ಉದ್ಯೋಗಿ ಆಗಿ ಕಾಣಿಸುತ್ತಿದ್ದಾರೆ. ವೀರೇಂದ್ರ ಅವರ ಚಿತ್ರಕ್ಕೆ ಸಂಭಾಷಣೆ ಬರೆದಿರುವರು.
ಕೇವಲ ಎಂಟು ಪಾತ್ರಗಳನ್ನು ಒಳಗೊಂಡ ಈ 'ಪ್ರೀತಿ ಗೀತಿ ಇತ್ಯಾದಿ' ಚಿತ್ರದ ನಾಯಕಿ ಸಂಗೀತಾ ಭಟ್. ಯೋಗರಾಜ್ ಭಟ್ ಅವರು ಒಳ್ಳೇದು ಹಾಗೂ ಕೆಟ್ಟದ್ದರ ಬಗ್ಗೆ ಒಂದು ಹಾಡನ್ನು ರಚಿಸಿದ್ದಾರೆ. ಜಯಂತ್ ಕಾಯ್ಕಿಣಿ ಸಹ ಈ ಚಿತ್ರಕ್ಕೆ ಸಾಹಿತ್ಯ ಒದಗಿಸಿದ್ದಾರೆ.
ವೀರ ಸಮರ್ಥ ಅವರ ಸಂಗೀತವಿರುವ ಚಿತ್ರಕ್ಕೆ ಭಾಸ್ಕರ್ ರೆಡ್ಡಿ ಅವರು ಛಾಯಾಗ್ರಾಹಕರು. ರಂಗಾಯಣ ರಘು, ವಿನಯಾ ಪ್ರಕಾಶ್, ಮಂಜುನಾಥ್ ಗೌಡ, ನಭ ನಟೇಶ್ ಹಾಗೂ ಇತರರು ತಾರಾಗಣದಲ್ಲಿ ಇದ್ದಾರೆ. ಜಯಣ್ಣ ಫಿಲ್ಮ್ಸ್ ಈ ಚಿತ್ರದ ಹಂಚಿಕೆ ಉಸ್ತುವಾರಿ ವಹಿಸಿದೆ. ಬೆಂಗಳೂರಿನ ಅನುಪಮ ಪ್ರಮುಖ ಚಿತ್ರಮಂದಿರ ಸೇರಿದಂತೆ ರಾಜ್ಯದಾದ್ಯಂತ 30ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. (ಒನ್ಇಂಡಿಯಾ ಕನ್ನಡ)