'ಉತ್ತಮ ಭವಿಷ್ಯಕ್ಕಾಗಿ ಮತ ಚಲಾಯಿಸಿ' ಎಂದ ನಟ ನೆನಪಿರಲಿ ಪ್ರೇಮ್
ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ. ನಟಿ ಅಮೂಲ್ಯ ಇಂದು ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಆರ್ ಆರ್ ನಗರ ವ್ಯಪ್ತಿಯಲ್ಲಿರುವ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಮತದಾನ ಮಾಡಿ, ಅಭಿಮಾನಿಗಳಿಗೂ ಮತಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ.
ನಟ ನೆನಪಿರಲಿ ಪ್ರೇಮ್ ಸಹ ಮತದಾನದ ಹಕ್ಕು ಚಲಾಯಿಸಿದ್ದಾರೆ. ಪತ್ನಿಯ ಜೊತೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿ, ಅಭಿಮಾನಿಗಳು ಸಹ ಮತದಾನ ಮಾಡುವಂತೆ ಮನವಿ ಮಾಡಿಕೊಂಡರು. ಮತದಾನ ಮಾಡಿದ ಬಳಿಕ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
'ನಾನು ನನ್ನ ಕುಟುಂಬದೊಂದಿಗೆ ಮತ ಚಲಾಯಿಸಿದ್ದೇನೆ. ನಮ್ಮೆಲ್ಲರ ಉತ್ತಮ ಭವಿಷ್ಯಕ್ಕಾಗಿ ನೀವು ಮತ ಚಲಾಯಿಸಿ. ಪ್ರಜಾ ಪ್ರಭುತ್ವ ಉಳಿಸಿ' ಎಂದು ಬರೆದುಕೊಂಡಿದ್ದಾರೆ.

ಇನ್ನೂ ನಟಿ ಅಮೂಲ್ಯ, ಪತಿ ಜಗದೀಶ್ ಹಾಗೂ ಅತ್ತೆ-ಮಾವ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಕುಟುಂಬ ಸಮೇತ ಮತದಾನ ಮಾಡಿದ್ದಾರೆ. ನಂತರ ಮಾಧ್ಯಮದವರ ಬಳಿ ಮಾತನಾಡಿದ ಅಮೂಲ್ಯ 'ಎಲ್ಲರೂ ಮತದಾನದ ಹಕ್ಕನ್ನು ಚಲಾಯಿಸಿ' ಎಂದು ವಿನಂತಿಸಿದರು.
'ಕೊರೊನಾ ವೈರಸ್ ಭೀತಿಯಿಂದ ಮತದಾನ ಮಾಡುವುದು ಕಳೆದುಕೊಳ್ಳಬೇಡಿ. ಚುನಾವಣಾ ಆಯೋಗ ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಿದೆ, ಧೈರ್ಯವಾಗಿ ಬಂದು ಮತದಾನ ಮಾಡಬಹುದು' ಎಂದು ಸಲಹೆ ನೀಡಿದರು.


Click it and Unblock the Notifications











