Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಾಸ್ವಾಳ' ಕಣ್ಣಿಗೊತ್ತಿ ಕಿವಿಗಿಟ್ಟುಕೊಳ್ಳುವ ಸಮಯ
ದಸರಾ ಹಬ್ಬಕ್ಕೆ ಜೋಗಯ್ಯ ಪ್ರೇಮ್ ಎಲ್ಲರಿಗೂ 'ದಾಸ್ವಾಳ' ಕೊಡಲು ಬರುತ್ತಿದ್ದಾರೆ. ಈ ದಾಸ್ವಾಳ ಗಿಡಕ್ಕೆ ನೀರೆದು ಗೊಬ್ಬರ ಹಾಕಿ ಪೋಷಿಸಿರುವವರು ರಕ್ಷಿತಾ ಪ್ರೇಮ್ ಹಾಗೂ ಅಣಜಿ ನಾಗರಾಜ್. ಈಗದು ಅರಳಿ ನಿಂತಿದೆ. ಇದೇ ಅಕ್ಟೋಬರ್ 11ರಂದು ಪ್ರೇಕ್ಷಕರ ಮುಂದೆ ಬರುತ್ತಿದೆ.
ಈಗಾಗಲೆ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ. ಪ್ರೇಮ್ ಅಡ್ಡ ಚಿತ್ರದ ಬಳಿಕ ಪ್ರೇಮ್ ಮತ್ತೆ ಬಣ್ಣ ಹಚ್ಚಿರುವ ಚಿತ್ರ. ದಾಸ್ವಾಳ ಚಿತ್ರಕ್ಕೆ ಎಂ.ಎಸ್.ರಮೇಶ್ ಆಕ್ಷನ್ ಕಟ್ ಹೇಳಿದ್ದಾರೆ.
ಈ ಬಾರಿ ಪ್ರೇಮ್ ಗೆ ಜೊತೆಯಾಗಿರುವವರು ಹೇಮಾ ಚೌದರಿ. ರಂಗಾಯಣ ರಘು, ಅವಿನಾಶ್ ಚಿತ್ರದ ಪಾತ್ರವರ್ಗದಲ್ಲಿದ್ದಾರೆ. ಗುರುಕಿರಣ್ ಅವರ ಸಂಗೀತ, ದಾಸರಿ ಸೀನು ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಪ್ರೇಮ್ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇದೊಂದು ಸಂಬಂಧಗಳ ಸುತ್ತುವ ಕಥೆ. ನಾಲ್ಕು ಮಂದಿಯ ಕಥೆ ಎನ್ನುತ್ತದೆ ಚಿತ್ರತಂಡ. ಪ್ರೇಮ್ ಮತ್ತು ರಂಗಾಯಣ ರಘು ಕಾಂಬಿನೇಷನ್ ಚೆನ್ನಾಗಿ ಮೂಡಿಬಂದಿದೆ. ಚಿತ್ರದ ಹಾಡುಗಳಿಗೂ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ ಎನ್ನುತ್ತಾರೆ ನಿರ್ದೇಶಕರು. (ಏಜೆನ್ಸೀಸ್)