Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಾರ್ ನಟರ ಸಿನಿಮಾದ ಟೈಟಲ್ ಲಾಂಚ್ ಗೆ ಅತಿಥಿ ಯಾರು ಗೊತ್ತಾ?
ಚಂದನವನದಲ್ಲಿ ಮಲ್ಟಿ ಸ್ಟಾರರ್ ಸಿನಿಮಾ ಸೆಟ್ಟೇರುತ್ತಿರುವ ವಿಷಯವನ್ನು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ತಾನೇ. ಇದೀಗ ಈ ಸುದ್ದಿ ಎಲ್ಲೆಡೆ ವೈರಲ್ ಆಗಿ ಸಂಚಲನ ಸೃಷ್ಟಿಸಿದ್ದು, ಒಂಥರಾ ಟ್ರೆಂಡ್ ಹುಟ್ಟು ಹಾಕಿದೆ.
ಇದೇ ಮೊದಲ ಬಾರಿಗೆ ಬಹುಭಾಷಾ ನಟ ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಂದಾಗಿ ಕಾಣಿಸಿಕೊಳ್ಳುವುದರಿಂದ ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ಕೊಂಚ ನಿರೀಕ್ಷೆ ಜಾಸ್ತೀನೇ ಇದೆ.[ಸ್ಟಾರ್ ನಟರ ಅಪೂರ್ವ ಮಿಲನಕ್ಕೆ, ಸಾಕ್ಷಿಯಾಗಲಿರುವ ಬಿಗ್ ವೇದಿಕೆ.!]
ಅಂದಹಾಗೆ ಇದೀಗ ಹೊಸ ವಿಷ್ಯಾ ಏನಪ್ಪಾ ಅಂದ್ರೆ, ಇದೇ ಡಿಸೆಂಬರ್ 13 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಈ ಸ್ಟಾರ್ ನಟರ ಸಿನಿಮಾದ ಟೈಟಲ್ ಲಾಂಚ್ ಮಾಡಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ.[ವಾವ್! ಶಿವಣ್ಣ ಹಾಗೂ ಕಿಚ್ಚ ಸುದೀಪ್ ಒಟ್ಟಿಗೆ ನಟಿಸ್ತಾರಂತೆ!]
ಈ ಬಗ್ಗೆ ಬೆಂಗಳೂರಿನಲ್ಲಿರುವ ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಚಿತ್ರತಂಡ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಿದ್ದಾರೆ. ಆದರೆ ಮುಖ್ಯಮಂತ್ರಿಗಳು ಇನ್ನೂ ಹಸಿರು ನಿಶಾನೆ ತೋರಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಕೃಪೆ ತೋರಿದರೆ ಸ್ಟಾರ್ ನಟರ ಚಿತ್ರದ ಟೈಟಲ್ ಲಾಂಚ್ ಅವರ ಕೈಯಲ್ಲಿ ಆಗೋದು ಪಕ್ಕಾ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಣಿಸಿಕೊಂಡಿದ್ದ 'ಜೋಗಿ' ಮತ್ತು 'ಜೋಗಯ್ಯ' ಸಿನಿಮಾವನ್ನು ನಿರ್ದೇಶನ ಮಾಡಿದ್ದ ಹ್ಯಾಟ್ರಿಕ್ ನಿರ್ದೇಶಕ 'ಜೋಗಿ' ಪ್ರೇಮ್ ಅವರು ಈ ಮಲ್ಟಿ ಸ್ಟಾರ್ಸ್ ಗೆ ಆಕ್ಷನ್-ಕಟ್ ಹೇಳುತ್ತಿದ್ದಾರೆ.[100 ಕೋಟಿ ಬಜೆಟ್ ನಲ್ಲಿ ತಯಾರಾಗುತ್ತಿದೆ, ಕಿಚ್ಚ-ಶಿವಣ್ಣ ಅವರ ಸಿನಿಮಾ!]
ಸುಮಾರು 100 ಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ಮೂಡಿಬರಲಿರುವ ಈ ಸಿನಿಮಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡೋದು ಗ್ಯಾರಂಟಿ.