Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಮಂದಿರದಲ್ಲಿ ಹೋಮ ಮಾಡಿಸಿದ ನಟ ಜಗ್ಗೇಶ್
ನಟ ಜಗ್ಗೇಶ್ ಇಂದು ವಿಶೇಷ ಹೋಮ ಮಾಡಿಸಿದ್ದಾರೆ. ತಮ್ಮ 'ಪ್ರೀಮಿಯರ್ ಪದ್ಮಿನಿ' ಸಿನಿಮಾ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದ್ದು, ಈ ಕಾರಣ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಅನುಪಮ ಚಿತ್ರಮಂದಿರದಲ್ಲಿ ಹೋಮ ಮಾಡಿಸಿರುವ ಅವರು, ಸಿನಿಮಾದ ಯಶಸ್ಸಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಈ ವೇಳೆ ಸಿನಿಮಾದ ನಿರ್ದೇಶಕ ರಮೇಶ್ ಇಂದಿರಾ ಹಾಗೂ ನಟ ಪ್ರಮೋದ್ ಪಂಜು ಭಾಗಿಯಾಗಿದ್ದಾರೆ.
ಧಾರಾವಾಹಿಯಲ್ಲಿ ಕಾಣಿಸಿಕೊಂಡ ನಟ ಜಗ್ಗೇಶ್
''ಪ್ರೀಮಿಯರ್ ಪದ್ಮಿನಿ' ಚಿತ್ರಕ್ಕೆ ಹಾಗೂ ಈ ಚಿತ್ರಕ್ಕಾಗಿ ಶ್ರಮಿಸಿದ ಸರ್ವರಿಗೂ ಶುಭವಾಗಲಿ ಎಂದು ರಾಯರಲ್ಲಿ ಪ್ರಾರ್ಥನೆ...'' ಎಂದಿರುವ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಪೂಜೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಟ ಜಗ್ಗೇಶ್ ದೇವರ ಮೇಲೆ ಅಪಾರ ನಂಬಿಕೆ ಹೊಂದಿರುವ ವ್ಯಕ್ತಿ. ಶಾಸ್ತ್ರ, ಪೂಜೆ ಇವುಗಳನ್ನು ಬಹಳ ಇಷ್ಟು ಪಡುವವರು ಅವರು, ರಾಘವೇಂದ್ರ ಸ್ವಾಮಿಗಳ ಅಪ್ಪಟ್ಟ ಭಕ್ತ ಕೂಡ ಹೌದು. ಈ ಹಿಂದೆ '8MM' ಸಿನಿಮಾಗೆ ಕೂಡ ಜಗ್ಗೇಶ್ ಇದೇ ರೀತಿ ಪೂಜೆ ಮಾಡಿಸಿದ್ದರು.
#premierpadmini ಚಿತ್ರಕ್ಕೆ ಹಾಗು ಈ ಚಿತ್ರಕ್ಕಾಗಿ ಶ್ರಮಿಸಿದ ಸರ್ವರಿಗು ಶುಭವಾಗಲಿ ಎಂದು ರಾಯರಲ್ಲಿ ಪ್ರಾರ್ಥನೆ...
— Chowkidar🙏ನವರಸನಾಯಕ ಜಗ್ಗೇಶ್ (@Jaggesh2) April 26, 2019
ನೀವು ಹರಸಿ ಹಾರೈಸಿ...ಶುಭದಿನ... pic.twitter.com/MlywyAClFX
ಅಂದಹಾಗೆ, 'ಪ್ರೀಮಿಯರ್ ಪದ್ಮಿನಿ' ಸಿನಿಮಾ ಬೆಂಗಳೂರಿನ ಅನುಪಮ ಸೇರಿದಂತೆ ರಾಜ್ಯಾದಂತ್ಯ ಇಂದು ರಿಲೀಸ್ ಆಗುತ್ತಿದೆ. ಶ್ರುತಿ ನಾಯ್ಡು ಚಿತ್ರದ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಜಗ್ಗೇಶ್, ಸುಧಾರಾಣಿ, ಹಿತಾ ಚಂದ್ರಶೇಖರ್, ಪಂಜು, ಮಧು, ವಿಕ್ರಮ್ ಸಿಂಹ ನಟಿಸಿದ್ದಾರೆ.