Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲು ಹೀರೋ, ಈಗ ನಿರ್ದೇಶಕ: ಸಿನಿಮಾ ತೆರೆಗೆ ಮುನ್ನವೇ ಸಾವು
ಒಂದೇ ಸಿನಿಮಾದ ಹೀರೋ ಹಾಗೂ ನಿರ್ದೇಶಕ ಇಬ್ಬರೂ ಕೆಲವೇ ದಿನಗಳ ಅಂತರದಲ್ಲಿ ಸಾವನ್ನಪ್ಪಿದ್ದಾರೆ. ಅದೂ ಅವರ ಸಿನಿಮಾ ತೆರೆಗೆ ಬರುವ ಮುನ್ನವೇ!
ಕನ್ನಡದಲ್ಲಿ 'ಕೆಮಿಸ್ಟ್ರಿ ಆಫ್ ಕರಿಯಪ್ಪ', 'ಸಂಯುಕ್ತ2' ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ನಿರ್ಮಾಪಕ ಡಿ.ಎಸ್.ಮಂಜುನಾಥ್ 'ಪ್ರೆಸೆಂಟ್ ಪ್ರಪಂಚ 0% ಲವ್' ಹೆಸರಿನ ಸಿನಿಮಾ ಮೂಲಕ ನಾಯಕರಾಗಿದ್ದರು. ಆದರೆ ಈ ಸಿನಿಮಾ ತರೆಗೆ ಬರುವ ಮುನ್ನವೇ ಕೆಲವೇ ದಿನಗಳ ಹಿಂದೆ ಕೊರೊನಾದಿಂದಾಗಿ ನಿಧನ ಹೊಂದಿದರು. ಇದೀಗ ಇದೇ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದ ಯುವ ನಿರ್ದೇಶಕ ಅಭಿರಾಮ್ ಸಹ ಕೊರೊನಾದಿಂದ ನಿಧನ ಹೊಂದಿದ್ದಾರೆ.
ಅಭಿರಾಮ್ಗೆ ಕೆಲವು ದಿನಗಳಿಂದ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಆದರೆ ಅದನ್ನು ಅವರು ನಿರ್ಲಕ್ಷ್ಯ ಮಾಡಿ ಕೋವಿಡ್ ಪರೀಕ್ಷೆಯನ್ನು ಸಹ ಮಾಡಿಸಿಕೊಳ್ಳಲಿಲ್ಲ. ನಿನ್ನೆಯಿಂದ ಅಭಿರಾಮ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಇಂದು (ಮೇ 28) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
ಡಿ.ಆರ್.ಮಂಜುನಾಥ್ ಅವರೇ ನಿರ್ಮಾಣ ಮಾಡಿದ್ದ 'ಸಂಯುಕ್ತ 2' ಸಿನಿಮಾದ ಮೂಲಕ ಅಭಿರಾಮ್ ನಿರ್ದೇಶಕರಾಗಿದ್ದರು. ನಂತರ ಮಂಜುನಾಥ್ ಅವರನ್ನೇ ನಾಯಕನ್ನಾಗಿಸಿ 'ಪ್ರೆಸೆಂಟ್ ಪ್ರಪಂಚ ೦% ಲವ್' ಸಿನಿಮಾ ಮಾಡಿದ್ದರು. ಆದರೆ ಸಿನಿಮಾ ತೆರೆಗೆ ಬರುವ ಮುನ್ನವೇ ನಾಯಕ, ನಿರ್ದೇಶಕ ಇಬ್ಬರೂ ನಿಧನ ಹೊಂದಿದ್ದಾರೆ.
ಸಿನಿಮಾದ ಚಿತ್ರೀಕರಣ ಮುಗಿದಿತ್ತು, ಲಾಕ್ಡೌನ್ ಮುಗಿದ ನಂತರ ಸಿನಿಮಾವನ್ನು ತೆರೆಗೆ ತರಲು ಸಿದ್ಧವಾಗಿದ್ದರು. ಆದರೆ ಕನಸು ಈಡೇರುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಪ್ರೀತಿಯನ್ನು ಬಿಟ್ಟು ಹಣದ ಹಿಂದೆ ಓಡುವ ಕತೆಯನ್ನು ಈ ಸಿನಿಮಾ ಹೊಂದಿದೆ.
Recommended Video
ಕೊರೊನಾದಿಂದಾಗಿ ಸ್ಯಾಂಡಲ್ವುಡ್ನ ಸಾಕಷ್ಟು ನಟರು, ತಂತ್ರಜ್ಞರು ಇತ್ತೀಚಿನ ದಿನಗಳಲ್ಲಿ ಸಾವನ್ನಪ್ಪಿದ್ದಾರೆ. ಹಿರಿಯ ನಟ ಬಿ.ಎಂ.ಕೃಷ್ಣೇಗೌಡ, ಆರ್.ಎಸ್.ರಾಜಾರಾಮ್, ಚಿತ್ರಸಾಹಿತಿ ಶ್ರೀರಂಗ, ಕೋಟಿ ರಾಮು, ಶಂಖನಾದ ಅರವಿಂದ್, ನಿರ್ದೇಶಕ ರೇಣುಕಾ ಶರ್ಮಾ ಇನ್ನೂ ಹಲವಾರು ಮಂದಿ ಇತ್ತೀಚಿನ ದಿನಗಳಲ್ಲಿ ಸಾವನ್ನಪ್ಪಿದ್ದಾರೆ.