Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರೇ ತಿಂಗಳಿಗೆ ತವರಿನವರಿಗೆ ಸಿಹಿಸುದ್ದಿ ಕೊಟ್ಟ ನಟಿ ಪ್ರಿಯಾಮಣಿ.!
Recommended Video
ನಟಿ ಪ್ರಿಯಾಮಣಿ-ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಸರಿಯಾಗಿ ಮೂರು ತಿಂಗಳು ಕಳೆದಿದೆ. ಮೂರೇ ತಿಂಗಳಿಗೆ ಪ್ರಿಯಾಮಣಿ ತವರಿನವರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಅಭಿಮಾನಿಗಳು ಕೂಡ ಫುಲ್ ಖುಷಿ ಪಟ್ಟಿದ್ದಾರೆ.
ಮೂರೇ ತಿಂಗಳಿಗೆ ಸಿಹಿ ಸುದ್ದಿನಾ... ಅಂತ ಆಶ್ವರ್ಯ ಪಡಬೇಡಿ. ನಾವ್ ಹೇಳ್ತಿರೋದು ಸಿನಿಮಾ ವಿಚಾರ ಮಾತ್ರ. ಪ್ರಿಯಾಮಣಿ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.
'ನನ್ನ ಪ್ರಕಾರ' ಎನ್ನುವ ಚಿತ್ರದಲ್ಲಿ ಪ್ರಿಯಾಮಣಿ ಆಕ್ಟ್ ಮಾಡುತ್ತಿದ್ದು ಇಂದು ಸಿನಿಮಾ ಸೆಟ್ಟೇರಿದೆ. 'ದನಕಾಯೋನು' ಸಿನಿಮಾದ ನಂತ್ರ ಯಾವುದೇ ಚಿತ್ರ ಒಪ್ಪಿಕೊಳ್ಳದ ಪ್ರಿಯಾಮಣಿ ಈಗ ಹೊಸಬರ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಇದೇ ವಾರದಿಂದ ಚಿತ್ರೀಕರಣ ಶುರುವಾಗಲಿದ್ದು, ವಿನಯ್ ಅನ್ನೋ ನವ ನಿರ್ದೇಶಕ ಸಿನಿಮಾವನ್ನ ಡೈರೆಕ್ಟ್ ಮಾಡ್ತಿದ್ದಾರೆ. ಚಿತ್ರದಲ್ಲಿ ಮಯೂರಿ, ಕಿಶೋರ್ ಹಾಗೂ ವಿಹಾನ್ ಗೌಡ ಇನ್ನೂ ಅನೇಕರು ಅಭಿನಯಿಸ್ತಿದ್ದಾರೆ. ಜಿ.ವಿ.ಕೆ ಕಂಬೈನ್ಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗ್ತಿದ್ದು, ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ.
ಮೂರು ಶೆಡ್ಯೂಲ್ ನಲ್ಲಿ ಚಿತ್ರೀಕರಣ ಮುಗಿಸಿ ಮಾರ್ಚ್ ಅಂತ್ಯದ ವೇಳೆಗೆ ಸಿನಿಮಾವನ್ನ ತೆರೆಗೆ ತರೋದಕ್ಕೆ ಚಿತ್ರತಂಡ ಪ್ಲಾನ್ ಮಾಡಿದೆ.