Don't Miss!
- News Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇಕಾರರ ಸಂಕಷ್ಟ ನೀಗಲು ಅಭಿಯಾನ ಆರಂಭಿಸಿದ ಪ್ರಿಯಾಂಕಾ ಉಪೇಂದ್ರ
ಕೊರೊನಾ ವೈರಸ್ ಲೋಕವನ್ನೇ ತಲ್ಲಣಗೊಳಿಸಿದೆ. ಕೊರೊನಾ ದಿಂದ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಪರಿಣಾಮಕ್ಕೆ ಒಳಗಾದವರು ಇಲ್ಲವೇ ಇಲ್ಲ ಎನ್ನುವಷ್ಟು ವಿರಳ.
ಲಕ್ಷಾಂತರ ಮಂದಿಯ ಆರೋಗ್ಯವನ್ನು ಹದಗೆಡಿಸಿರುವ ಕೊರೊನಾ ಅದಕ್ಕಿಂತಲೂ ಹೆಚ್ಚಿನ ಮಂದಿಯ ಜೀವನವನ್ನು ಅಂದಗೆಡಸಿದೆ. ಲಾಕ್ಡೌನ್ ನಿಂದಾಗಿಯಂತೂ ಲಕ್ಷಾಂತರ ಮಂದಿ ವ್ಯಾಪಾರವಿಲ್ಲದೆ, ಆದಾಯವಿಲ್ಲದೆ ಆರ್ಥಿಕವಾಗಿ ಸೊರಗಿ ಹೋಗಿದ್ದಾರೆ.
ಅನ್ಲಾಕ್ ಆಗಿದ್ದರೂ ಸಹ ಎಷ್ಟೋ ಉದ್ಯಮಗಳು ಇನ್ನೂ ಚೇತರಿಸಿಕೊಂಡಿಲ್ಲ. ಅವುಗಳಲ್ಲಿ ಪ್ರಮುಖವಾದುದು ಉಡುಪು ಉದ್ಯಮ. ಅದರಲ್ಲಿಯೂ ನೇಕಾರರಂತೂ ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೆ ಇವರ ನೆರವಿಗೆ ಧಾವಿಸಿದ್ದಾರೆ ನಟಿ ಪ್ರಿಯಾಂಕಾ ಉಪೇಂದ್ರ.
ಕುಶಲಕರ್ಮಿಗಳು, ನೇಕಾರರು, ದೇಸಿ ವಸ್ತುಗಳ ಉತ್ಪಾದಕರಿಗೆ ನೆರವಾಗಲೆಂದು ಪ್ರಿಯಾಂಕಾ ಉಪೇಂದ್ರ, ದೇಸಿ ಉತ್ಪನ್ನಗಳು ಹಾಗೂ ಖಾದಿ ಉಡುಪುಗಳ ಪ್ರಚಾರಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಒಂದನ್ನು ಸಹ ಹಂಚಿಕೊಂಡಿದ್ದಾರೆ.
87000 ಮೀಟರ್ ಬಟ್ಟೆ ಉಳಿದಿದೆ: ಪ್ರಿಯಾಂಕಾ
'ಲಾಕ್ಡೌನ್ ಕಾರಣದಿಂದಾಗಿ ಸುಮಾರು 87000 ಮೀಟರ್ ಬಟ್ಟೆ ವ್ಯಾಪಾರವಾಗದೆ ಉಳಿದುಬಿಟ್ಟಿದೆ. ಶಿವಮೊಗ್ಗ ಹಾಗೂ ರಾಜ್ಯದ ಇತರ ದೇಸಿ ನೇಯ್ಗೆ ಸಮುದಾಯದ ಸಾಹಸೋಧ್ಯಮದ ಬಗ್ಗೆ ಕೇಳಿದ್ದ ನನಗೆ ಅವರ ಈಗಿನ ಪರಿಸ್ಥಿತಿ ಕೇಳಿ ಚಿಂತೆ ಹೆಚ್ಚಿದೆ' ಎಂದಿದ್ದಾರೆ ಪ್ರಿಯಾಂಕಾ.
ಎಲ್ಲರೂ ದೇಸಿ ಉತ್ಪನ್ನ ಖರೀದಿಸಬೇಕಿದೆ: ಪ್ರಿಯಾಂಕಾ
ಈ ಲಾಕ್ಡೌನ್ ದೇಸಿ ಕರಕುಶಲಕರ್ಮಿಗಳು, ನೇಕಾರರ ಬದುಕನ್ನು ಮುರಾಬಟ್ಟೆ ಮಾಡಿದೆ. ನಾವು ಈ ಸಮಯದಲ್ಲಿ ಅವರ ಸಹಾಯಕ್ಕೆ ನಿಲ್ಲಲೇ ಬೇಕಿದೆ. ನಾವು ಮೊದಲ್ಗೊಂಡು ದೇಸಿ ಕರಕುಶಲಕರ್ಮಿಗಳ ಉತ್ಪನ್ನಗಳನ್ನು ಖರೀದಿಸಬೇಕಿದೆ, ಆ ಮೂಲಕ ಅವರ ಜೀವನ ಹಾಗೂ ಕಲೆಯನ್ನು ಉಳಿಸಬೇಕಿದೆ ಎಂದಿದ್ದಾರೆ ಪ್ರಿಯಾಂಕಾ ಉಪೇಂದ್ರ.
ಸಾಮಾಜಿಕ ಜಾಲತಾಣ ಅಭಿಯಾನ ಆರಂಭಿಸಿದ ಪ್ರಿಯಾಂಕಾ
ಎಲ್ಲರೂ ದೇಸಿ ಉತ್ಪನ್ನವನ್ನು ಖರೀದಿಸಿ ಎಂದಿರುವ ಪ್ರಿಯಾಂಕಾ ಉಪೇಂದ್ರ, ದೇಸಿ ಉತ್ಪನ್ನವನ್ನು ಖರೀದಿಸುವ ಹಾಗೂ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವ ಅಭಿಯಾನವನ್ನು ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಿದ್ದಾರೆ ಪ್ರಿಯಾಂಕಾ.
Recommended Video
ಹಲವರನ್ನು ನಾಮಿನೇಟ್ ಮಾಡಿರುವ ಪ್ರಿಯಾಂಕಾ ಉಪೇಂದ್ರ
ದೇಸಿ ಉತ್ಪನ್ನ ಖರೀದಿಸುವ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವ ಅಭಿಯಾನದಲ್ಲಿ ನಟಿ ಪಾರೂಲ್ ಯಾದವ್, ಪತಿ ಉಪೇಂದ್ರ, ಪಲ್ಲವಿ ಗುರುಕಿರಣ್, ಶಿಲ್ಪಾ ಗಣೇಶ್, ಕವಿತಾ ಲಂಕೇಶ್ ಇನ್ನೂ ಹಲವರನ್ನು ನಾಮಿನೇಟ್ ಮಾಡಿದ್ದಾರೆ ಪ್ರಿಯಾಂಕಾ ಉಪೇಂದ್ರ.