Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ತೆರೆಯ ಮೇಲೆ ಒಂದಾಗ್ತಾರಾ ಕುಚಿಕು ಗೆಳೆಯರು.?
ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರು 'ಚಕ್ರವರ್ತಿ' ಎಂಬ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಅಂಜಲಿ ಅವರು ಕಾಣಿಸಿಕೊಳ್ಳುತ್ತಾರೆ ಎಂಬ ವಿಚಾರವನ್ನು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ.
ಇದೀಗ ಈ ಚಿತ್ರತಂಡದಿಂದ ಹೊರಬಿದ್ದಿರುವ ಖಾಸ್ ಖಬರ್ ಏನಪ್ಪಾ ಅಂದ್ರೆ ಈ ಚಿತ್ರದಲ್ಲಿ ದರ್ಶನ್ ಅವರ ಜೊತೆ ಅವರ ಖಾಸ ದೋಸ್ತ್ ನಟ 'ಡೆಡ್ಲಿ' ಆದಿತ್ಯ ಅವರು ಮಿಂಚಲಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ಮಾತ್ರವಲ್ಲದೇ ಇದೇ ತಿಂಗಳು 24 ರಂದು ಸಿನಿಮಾ ಸೆಟ್ಟೇರಿ ಶೂಟಿಂಗ್ ಆರಂಭವಾಗಲಿದೆ.[ದರ್ಶನ್ ಅವರ 'ಚಕ್ರವರ್ತಿ' ಚಿತ್ರದ ನಾಯಕಿ ಇವರೇ]
ಅಂದಹಾಗೆ ಈ ಚಿತ್ರಕ್ಕೆ ನಿರ್ಮಾಪಕ ಅನಜಿ ನಾಗರಾಜ್ ಅವರು ಬಂಡವಾಳ ಹೂಡಲಿದ್ದಾರೆ. ಈ ಮೊದಲು ನಿರ್ಮಾಪಕ ಸತ್ಯ (ಸತ್ಯಪ್ರಕಾಶ್) ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ ಎಂದಾಗಿತ್ತು. ಇದೀಗ ಕೆಲವು ಬದಲಾವಣೆಗಳಿಂದ ಹಾಗೂ ಕೆಲವು ಕಾರಣಗಳಿಂದ ಚಿತ್ರಕ್ಕೆ 'ಸ್ನೇಹನಾ ಪ್ರೀತಿನಾ' ಖ್ಯಾತಿಯ ನಿರ್ಮಾಪಕ ಅನಜಿ ನಾಗರಾಜ್ ಬಂಡವಾಳ ಹೂಡುತ್ತಿದ್ದಾರೆ.[ಹೊಸ ಅವತಾರ ಎತ್ತಿದ ಚಾಲೆಂಜಿಂಗ್ ಸ್ಟಾರ್ ದರ್ಶನ್]
ದರ್ಶನ್ ಮತ್ತು ಆದಿತ್ಯ ಅವರು ಈ ಮೊದಲು 'ಸ್ನೇಹನಾ ಪ್ರೀತಿನಾ' ಚಿತ್ರದಲ್ಲಿ ಒಂದಾಗಿ ತೆರೆ ಹಂಚಿಕೊಂಡಿದ್ದರು. ಇದೀಗ ನವ ನಿರ್ದೇಶಕ ಚಿಂತನ್ ಅವರು ಆಕ್ಷನ್-ಕಟ್ ಹೇಳುತ್ತಿರುವ 'ಚಕ್ರವರ್ತಿ' ಚಿತ್ರದಲ್ಲಿ ಕೂಡ ದರ್ಶನ್ ಮತ್ತು ಆದಿತ್ಯ ಕಮಾಲ್ ಮಾಡುತ್ತಾರ ಅಂತ ಕಾದು ನೋಡಬೇಕಿದೆ.['ಡೆಡ್ಲಿ' ಆದಿತ್ಯರ 'ಬೆಂಗಳೂರು ಅಂಡರ್ ವರ್ಲ್ಡ್'ಗೆ ದರ್ಶನ್ ಸಾಥ್]
ಈಗಾಗಲೇ 'ಚಕ್ರವರ್ತಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಭಾರಿ ರೆಸ್ಪಾನ್ಸ್ ಕೂಡ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ದರ್ಶನ್ ಅವರು ವಿಭಿನ್ನ ಲುಕ್ ನಲ್ಲಿ ಮಿಂಚಲಿದ್ದು, ಭೂಗತ ಲೋಕದ ಕಥೆಯನ್ನು ಈ ಸಿನಿಮಾದಲ್ಲಿ ಎಳೆ-ಎಳೆಯಾಗಿ ಬಿಚ್ಚಿಡಲು ನಿರ್ದೇಶಕ ಚಿಂತನ್ ಅವರು ಪ್ಲ್ಯಾನ್ ಮಾಡುತ್ತಿದ್ದಾರೆ.