Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ತೆರೆಯ ಮೇಲೆ ಒಂದಾಗ್ತಾರಾ ಕುಚಿಕು ಗೆಳೆಯರು.?
ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರು 'ಚಕ್ರವರ್ತಿ' ಎಂಬ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಅಂಜಲಿ ಅವರು ಕಾಣಿಸಿಕೊಳ್ಳುತ್ತಾರೆ ಎಂಬ ವಿಚಾರವನ್ನು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ.
ಇದೀಗ ಈ ಚಿತ್ರತಂಡದಿಂದ ಹೊರಬಿದ್ದಿರುವ ಖಾಸ್ ಖಬರ್ ಏನಪ್ಪಾ ಅಂದ್ರೆ ಈ ಚಿತ್ರದಲ್ಲಿ ದರ್ಶನ್ ಅವರ ಜೊತೆ ಅವರ ಖಾಸ ದೋಸ್ತ್ ನಟ 'ಡೆಡ್ಲಿ' ಆದಿತ್ಯ ಅವರು ಮಿಂಚಲಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ಮಾತ್ರವಲ್ಲದೇ ಇದೇ ತಿಂಗಳು 24 ರಂದು ಸಿನಿಮಾ ಸೆಟ್ಟೇರಿ ಶೂಟಿಂಗ್ ಆರಂಭವಾಗಲಿದೆ.[ದರ್ಶನ್ ಅವರ 'ಚಕ್ರವರ್ತಿ' ಚಿತ್ರದ ನಾಯಕಿ ಇವರೇ]
ಅಂದಹಾಗೆ ಈ ಚಿತ್ರಕ್ಕೆ ನಿರ್ಮಾಪಕ ಅನಜಿ ನಾಗರಾಜ್ ಅವರು ಬಂಡವಾಳ ಹೂಡಲಿದ್ದಾರೆ. ಈ ಮೊದಲು ನಿರ್ಮಾಪಕ ಸತ್ಯ (ಸತ್ಯಪ್ರಕಾಶ್) ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ ಎಂದಾಗಿತ್ತು. ಇದೀಗ ಕೆಲವು ಬದಲಾವಣೆಗಳಿಂದ ಹಾಗೂ ಕೆಲವು ಕಾರಣಗಳಿಂದ ಚಿತ್ರಕ್ಕೆ 'ಸ್ನೇಹನಾ ಪ್ರೀತಿನಾ' ಖ್ಯಾತಿಯ ನಿರ್ಮಾಪಕ ಅನಜಿ ನಾಗರಾಜ್ ಬಂಡವಾಳ ಹೂಡುತ್ತಿದ್ದಾರೆ.[ಹೊಸ ಅವತಾರ ಎತ್ತಿದ ಚಾಲೆಂಜಿಂಗ್ ಸ್ಟಾರ್ ದರ್ಶನ್]
ದರ್ಶನ್ ಮತ್ತು ಆದಿತ್ಯ ಅವರು ಈ ಮೊದಲು 'ಸ್ನೇಹನಾ ಪ್ರೀತಿನಾ' ಚಿತ್ರದಲ್ಲಿ ಒಂದಾಗಿ ತೆರೆ ಹಂಚಿಕೊಂಡಿದ್ದರು. ಇದೀಗ ನವ ನಿರ್ದೇಶಕ ಚಿಂತನ್ ಅವರು ಆಕ್ಷನ್-ಕಟ್ ಹೇಳುತ್ತಿರುವ 'ಚಕ್ರವರ್ತಿ' ಚಿತ್ರದಲ್ಲಿ ಕೂಡ ದರ್ಶನ್ ಮತ್ತು ಆದಿತ್ಯ ಕಮಾಲ್ ಮಾಡುತ್ತಾರ ಅಂತ ಕಾದು ನೋಡಬೇಕಿದೆ.['ಡೆಡ್ಲಿ' ಆದಿತ್ಯರ 'ಬೆಂಗಳೂರು ಅಂಡರ್ ವರ್ಲ್ಡ್'ಗೆ ದರ್ಶನ್ ಸಾಥ್]
ಈಗಾಗಲೇ 'ಚಕ್ರವರ್ತಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಭಾರಿ ರೆಸ್ಪಾನ್ಸ್ ಕೂಡ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ದರ್ಶನ್ ಅವರು ವಿಭಿನ್ನ ಲುಕ್ ನಲ್ಲಿ ಮಿಂಚಲಿದ್ದು, ಭೂಗತ ಲೋಕದ ಕಥೆಯನ್ನು ಈ ಸಿನಿಮಾದಲ್ಲಿ ಎಳೆ-ಎಳೆಯಾಗಿ ಬಿಚ್ಚಿಡಲು ನಿರ್ದೇಶಕ ಚಿಂತನ್ ಅವರು ಪ್ಲ್ಯಾನ್ ಮಾಡುತ್ತಿದ್ದಾರೆ.