Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸ್ನೇಹಿತರು' ವಿರುದ್ಧ ತಿರುಗಿಬಿದ್ದ ಬಾ.ಮಾ. ಹರೀಶ್
'ಸ್ನೇಹಿತರು' ಚಿತ್ರದಲ್ಲಿ ನನ್ನ ತರಹದ್ದೇ ಒಂದು ಪಾತ್ರವನ್ನು ಸೃಷ್ಟಿಸಲಾಗಿದೆ. ಪ್ರತಿಯೊಬ್ಬರಿಗೂ ಅವರದೇ ಆದಂತಹ ಮ್ಯಾನರಿಜಂ ಇರುತ್ತದೆ. ನನ್ನ ಮ್ಯಾನರಿಸಂನ್ನು ಅನುಕರಿಸಲಾಗಿದ್ದು, ಆ ಪಾತ್ರಕ್ಕೆ ಬಾಮ್ಮಾ ಹರೀಶ್ ಎಂದು ಕರೆದು ತೇಜೋವಧೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ಹೋಟೆಲ್ ಮಾಣಿಯನ್ನು ಬಾಮ್ಮಾ ಹರೀಶ್ ಎಂದು ಕರೆಯುವ ಸನ್ನಿವೇಶ ಚಿತ್ರದಲ್ಲಿದೆ ಎಂದು ನನ್ನ ಗೆಳೆಯರು ಗಮನಕ್ಕೆ ತಂದರು. ಚಿತ್ರದಲ್ಲಿ ಒಂದೆರಡು ಬಾರಿ ತಮ್ಮ ಹೆಸರನ್ನು ಬಳಸಲಾಗಿದೆ. ಇದನ್ನು ಕೇಳಿದಾಗ ನನ್ನ ಮನಸ್ಸಿಗೆ ಬಹಳ ನೋವಾಯಿತು.
ಈ ಸಂಬಂಧ ನಾನು 'ಸ್ನೇಹಿತರು' ಚಿತ್ರದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರಿಗೆ ಕರೆ ಮಾಡಿದೆ. ಅವರು ಈ ಬಗ್ಗೆ ನನಗೇನು ಗೊತ್ತಿಲ್ಲ. ದಯವಿಟ್ಟು ನಮ್ಮ ನಿರ್ದೇಶಕರಾದ ರಾಮ್ ನಾರಾಯಣ್ ಅವರನ್ನು ಸಂಪರ್ಕಿಸುವಂತೆ ಹೇಳಿದರು. ಅವರನ್ನು ಸಂಪರ್ಕಿಸಿದಾಗ ಅವರು ಫೋನಿಗೆ ಸಿಗುತ್ತಿಲ್ಲ ಎಂದಿದ್ದಾರೆ ಭಾ.ಮಾ.ಹರೀಶ್.
ಚಿತ್ರದಲ್ಲಿ ತಮ್ಮ ಹೆಸರನ್ನು ಬಳಸಿಕೊಂಡು ತಮ್ಮನ್ನು ತೇಜೋವಧೆ ಮಾಡಲಾಗಿದೆ. 'ಸ್ನೇಹಿತರು' ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರು ತಮ್ಮನ್ನು ಬಹಿರಂಗ ಕ್ಷಮೆಯಾಚಿಸಬೇಕು. ಹಾಗೆಯೇ ತಮ್ಮ ಹೆಸರುವ ಸನ್ನಿವೇಶದ ಧ್ವನಿಯನ್ನು ಮ್ಯೂಟ್ ಮಾಡಬೇಕು ಎಂದು ಹರೀಶ್ ಆಗ್ರಹಿಸಿದ್ದಾರೆ. (ಒನ್ಇಂಡಿಯಾ ಕನ್ನಡ)