Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
50 ವರ್ಷ ತುಂಬಿದ ಚಿನ್ನೇಗೌಡ ದಾಂಪತ್ಯ ಜೀವನ
''ಅಜ್ಜ ಆಲದ ಮರ.. ಅಜ್ಜಿ ಮಾವಿರ ಮರ.. ಹಕ್ಕಿಗಳು ನಾವೆಲ್ಲ..'' ಎನ್ನುವ ಹಾಡನ್ನು ನಿರ್ಮಾಪಕ ಚಿನ್ನಗೌಡ ಕುಟುಂಬ ಹಾಡುತ್ತಿದೆ. ಅವರ ಇಡೀ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ.
ನಿರ್ಮಾಪಕ ಚಿನ್ನಗೌಡ ಹಾಗೂ ಜಯಮ್ಮ ದಾಂಪತ್ಯಕ್ಕೆ 50 ವರ್ಷ ತುಂಬಿದೆ. ಈ ವಿಶೇಷವಾಗಿ ಅವರಿಬ್ಬರ ವಿವಾಹ ವಾರ್ಷಿಕೋತ್ಸವದ ಸಂಭ್ರಮ ಅದ್ದೂರಿಯಾಗಿ ನಡೆದಿದೆ. ಮತ್ತೊಮ್ಮೆ ತಾಳಿ ಕಟ್ಟಿಸುವ ಮೂಲಕ ಸಂಭ್ರಮಾಚರಣೆಯನ್ನು ಮಾಡಿಸಲಾಗಿದೆ.
ಆ ದಿನ ಸತ್ತಿದ್ದೀನಾ, ಬದುಕಿದ್ದೀನಾ ಎಂದು ಯಾರೂ ಬಂದು ನೋಡಿಲ್ಲ
ಈ ಕಾರ್ಯಕ್ರಮದಲ್ಲಿ ಚಿನ್ನಗೌಡರವರ ಪುತ್ರ ವಿಜಯ ರಾಘವೇಂದ್ರ, ಶ್ರೀಮುರಳಿ, ಇಬ್ಬರು ಸೊಸೆಯರು, ಮೊಮ್ಮಕ್ಕಳು ಹೀಗೆ ಇಡೀ ಫ್ಯಾಮಿಲಿ ಭಾಗಿಯಾಗಿದೆ. ನಟ ಶ್ರೀ ಮುರಳಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್ಪ ಅಮ್ಮನ ಸಂಭ್ರಮದ ಕ್ಷಣಗಳ ಫೋಟೋವನ್ನು ಹಂಚಿಕೊಂಡಿದ್ದಾರೆ.
''ನನ್ನ ಸುಂದರ ತಂದೆ, ತಾಯಿಯ ಐವತ್ತನೇ ವಿವಾಹ ವಾರ್ಷಿಕೋತ್ಸವ. ಐವತ್ತು ವರ್ಷದ ನಂತರ ಮತ್ತೆ ಅಪ್ಪ ಅಮ್ಮನಿಗೆ ಮೂರು ಗಂಟು ಹಾಕಿದ್ದಾರೆ. ಅವರ ಜೀವನಕ್ಕೆ ಖುಷಿಯನ್ನು ಬಯಸುತ್ತಿದ್ದೆವೆ.'' ಎಂದು ತಂದೆ ತಾಯಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
And it’s 50yrs Wedding Anniversary Celebration to My Beautiful Parents. Appaji tied Three knots to Amma again after 50yrs. it was a beautiful moment.wishing them only Happiness and peace of mind for the rest of their life! #ChinneGowdaJayamma50yrsWeddingAnniversaryCelebration pic.twitter.com/8MZp9SDNrm
— SRIIMURALI (@SRIMURALIII) June 3, 2019
ಶ್ರೀಮುರಳಿ ಲವ್ ಸ್ಟೋರಿ ಯಾವ ಸಿನಿಮಾಗೂ ಕಮ್ಮಿ ಇಲ್ಲ
ಅಂದಹಾಗೆ, ಚಿನ್ನೆಗೌಡ ಅವರು ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರ. ನಿರ್ಮಾಪಕ ಹಾಗೂ ವಿತರಕರಾಗಿದ್ದ ಇವರು, ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.