Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅವಂತಿಕಾ ಶೆಟ್ಟಿ ವಿರುದ್ಧ ವಾಣಿಜ್ಯ ಮಂಡಳಿಗೆ ಸುರೇಶ್ ದೂರು
'ರಾಜು ಕನ್ನಡ ಮೀಡಿಯಂ' ನಾಯಕ ನಟಿ ಅವಂತಿಕಾ ಶೆಟ್ಟಿ ವಿರುದ್ಧ ನಿರ್ಮಾಪಕ ಕೆ.ಎ.ಸುರೇಶ್ ಕರ್ನಾಟಕದ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ಸಲ್ಲಿಸಿದ್ದಾರೆ. ಅವಂತಿಕಾ ಶೆಟ್ಟಿ ರವರನ್ನು ಚಿತ್ರದಲ್ಲಿ ಮುಂದುವರೆಸುವುದಿಲ್ಲ, ಅವರನ್ನು ಬಿಟ್ಟು ಸಿನಿಮಾ ಚಿತ್ರೀಕರಣ ಮುಂದುವರೆಸಲು ಅನುಮತಿ ನೀಡಬೇಕು ಎಂದು ಕೆ.ಎ.ಸುರೇಶ್ ದೂರಿನಲ್ಲಿ ಮನವಿ ಮಾಡಿದ್ದಾರೆ.[ಸುರೇಶ್ ಮೇಲೆ ಅವಂತಿಕಾ ಆರೋಪ: ನಟ ಗುರುನಂದನ್ ಹೇಳಿದ್ದೇನು?]
ಇದಕ್ಕೂ ಮುನ್ನ 'ರಾಜು ಕನ್ನಡ ಮೀಡಿಯಂ' ಚಿತ್ರೀಕರಣಕ್ಕೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅಲ್ಲದೇ ನಾವು ಅಬ್ರಾಡ್ ಗೆ ಚಿತ್ರೀಕರಣಕ್ಕೆ ಕರೆದರು ಬಂದಿರಲಿಲ್ಲ ಎಂದು ಚಿತ್ರ ನಿರ್ಮಾಪಕ ಕೆ.ಎ.ಸುರೇಶ್ ರವರು ಅವಂತಿಕಾ ಶೆಟ್ಟಿ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಪ್ರತ್ಯಾರೋಪ ಮಾಡಿದ್ದ ಅವಂತಿಕಾ ಶೆಟ್ಟಿ ನಿರ್ಮಾಪಕರು ಮಾಡಿರುವ ಆರೋಪ ಸುಳ್ಳು ಎಂದು ಹೇಳಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಯಾಗಿತ್ತು.
ನಟ ಗುರುನಂದನ್ ಅಭಿನಯದ 'ರಾಜು ಕನ್ನಡ ಮೀಡಿಯಂ' ಚಿತ್ರದಲ್ಲಿ ನಟಿಸುತ್ತಿದ್ದ ನಟಿ ಅವಂತಿಕಾ ಶೆಟ್ಟಿ ರವರನ್ನು ಇತ್ತೀಚೆಗೆ ಸರಿಯಾಗಿ ಚಿತ್ರೀಕರಣಕ್ಕೆ ಬರುತ್ತಿಲ್ಲ ಎಂಬ ಕಾರಣದಿಂದ ಚಿತ್ರದಿಂದ ಕೋಕ್ ನೀಡಲಾಗಿತ್ತು ಎಂದು ಸುದ್ದಿ ಕೇಳಿಬಂದಿತ್ತು. ನಂತರ ತಮ್ಮ ಬಗ್ಗೆ ಮಾಡಿದ ಆರೋಪಗಳನ್ನು ತಳ್ಳಿಹಾಕಿದ್ದ ಅವಂತಿಕಾ ನಿರ್ಮಾಪಕರು ಮಾಡಿರುವ ಆರೋಪಗಳೆಲ್ಲ ಸುಳ್ಳು ಎಂದು ಹೇಳಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣ ಮೊರೆ ಹೋಗಿ ನಿರ್ಮಾಪಕರೇ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಕಾಸ್ಟ್ಯೂಮರ್ ಸಹ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು.[ಅವಂತಿಕಾ V/S ಸುರೇಶ್: ನಿರ್ಮಾಪಕನ ಆರೋಪಕ್ಕೆ ತಿರುಗು ಬಾಣ ಬಿಟ್ಟ ನಟಿ]