Don't Miss!
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Lifestyle
ಫೆಬ್ರವರಿ 2023: ಈ ಮಾಸದಲ್ಲಿರುವ ಪ್ರಮುಖ ಹಬ್ಬಗಳು ಹಾಗೂ ವ್ರತಗಳ ಪಟ್ಟಿ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಸಿಎಂ ಸ್ಪಂದಿಸಿದ್ದಾರೆ' ಎಂದ ಫಿಲಂ ಛೇಂಬರ್, 'ಸುಧಾಕರ್ ಖಾತೆ ಬದಲಿಸಿ' ಎಂದ ಕೆ.ಮಂಜು
ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿರುವ ವಿಷಯ ಇಡೀಯ ಚಿತ್ರರಂಗವನ್ನು ಆತಂಕಕ್ಕೆ ನೂಕಿದೆ. ಹಲವು ನಿರ್ಮಾಪಕರು, ನಟ-ನಟಿ, ನಿರ್ದೇಶಕರು ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್ ಅವರು ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ 'ಚಿತ್ರಮಂದಿರದ ಮೇಲೆ ಹೇರಲಾಗಿರುವ ನಿರ್ಬಂಧವನ್ನು ಹಿಂಪಡೆಯಬೇಕು' ಎಂದು ಮನವಿ ಮಾಡಿ ಕೋರಿಕೆ ಪತ್ರವನ್ನು ನೀಡಿದ್ದಾರೆ.
ಸಿಎಂ ಜೊತೆ ಕೆಲ ಕಾಲ ಚರ್ಚೆ ನಡೆಸಿದ ನಿಯೋಗವು, ಚಿತ್ರಮಂದಿರಗಳು ಪೂರ್ಣ ಕಾರ್ಯನಿರ್ವಹಿಸಬೇಕಾದ ಅವಶ್ಯತೆಯ ಬಗ್ಗೆ ಯಡಿಯೂರಪ್ಪ ಅವರಿಗೆ ಮನದಟ್ಟು ಮಾಡಿದೆ. ಸಭೆಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಜಯರಾಜ್, 'ಸಿಎಂ ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ' ಎಂದಿದ್ದಾರೆ.
'ಕೊರೊನಾ ಪ್ರಕರಣಗಳು ತುಸು ಕಡಿಮೆ ಆಗುತ್ತಿದ್ದಂತೆಯೇ ಪ್ರಸ್ತುತ ಮಾಡಲಾಗಿರುವ ಆದೇಶವನ್ನು ಪುನರ್ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ' ಎಂದು ಜಯರಾಜ್ ಹೇಳಿದ್ದಾರೆ.
ಈ ನಡುವೆ ಪ್ರತ್ಯೇಕ ಘಟನೆಯಲ್ಲಿ ಮಾತನಾಡಿರುವ ನಿರ್ಮಾಪಕ ಕೆ.ಮಂಜು, ಸಚಿವ ಸುಧಾಕರ್ ವಿರುದ್ಧ ಹರಿಹಾಯ್ದಿದ್ದಾರೆ.
'ಸುಧಾಕರ್ ಅವರು ಏಕಾಏಕಿ ನಿರ್ಣಯ ಜಾರಿ ಮಾಡಿದ್ದಾರೆ. ಇಲ್ಲಿ ಫಿಲಂ ಛೇಂಬರ್ ಇದೆ. ಸಿನಿಮಾಕ್ಕೆ ಸಂಬಂಧಿಸಿದ ವಾರ್ತಾ ಮತ್ತು ಪ್ರಸಾರ ಇಲಾಖೆ ಇದೆ. ಇವುಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಮೂಗಿನ ನೇರಕ್ಕೆ ನಿರ್ಣಯ ತೆಗೆದುಕೊಳ್ಳಲಾಗಿದೆ' ಎಂದಿದ್ದಾರೆ ಕೆ.ಮಂಜು.
'ಕಳೆದ ವಾರವಷ್ಟೆ ಸಿಎಂ ಅವರೇ ಟ್ವೀಟ್ ಮಾಡಿ ಚಿತ್ರಮಂದಿರಗಳ ಮೇಲೆ ನಿರ್ಬಂಧ ಇಲ್ಲ ಎಂದಿದ್ದಾರೆ. ಈಗ ಗುರುವಾರ ಸಿನಿಮಾ ಬಿಡುಗಡೆ ಆಗಿದೆ ಶುಕ್ರವಾರ ನಿರ್ಬಂಧ ಹೇರಿದ್ದಾರೆ. 80-100 ಕೋಟಿ ಹಾಕಿ ಸಿನಿಮಾ ಮಾಡಿದ ನಿರ್ಮಾಪಕನ ಕತೆ ಏನು? ಬೇರೆಯವರಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು' ಎಂದು ಆಕ್ರೋಶ ಹೊರಹಾಕಿದ್ದಾರೆ ಮಂಜು.
Recommended Video
'ಸುಧಾಕರ್ ಅವರು ಸಾಮಾನ್ಯದವರೇನಲ್ಲ ಅವರಿಗೆ ಎಲ್ಲ ಪರಿಸ್ಥಿತಿಗಳ ಅರಿವು ಇದೆ. ಆದರೂ ಸಹ ಆತುರದ ನಿರ್ಧಾರವನ್ನು ಅವರು ತೆಗೆದುಕೊಂಡಿದ್ದಾರೆ. ಅವರಿಗೆ ಸಿನಿಮಾದವರೆಂದರೆ ಸಿಟ್ಟಿದ್ದಹಾಗಿದೆ. ದಯವಿಟ್ಟು ಸಿಎಂ ಯಡಿಯೂರಪ್ಪ ಅವರು ಸುಧಾಕರ್ ಅವರ ಖಾತೆ ಬದಲಾವಣೆ ಮಾಡಬೇಕು' ಎಂದು ಕೆ.ಮಂಜು ಒತ್ತಾಯಿಸಿದ್ದಾರೆ.