Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆ ಮಂಜು ಮಗನ ಸಿನಿಮಾ ಎಂಟ್ರಿಗೆ ಕಿಚ್ಚನಿಂದ ಸ್ವಾಗತ
ಸ್ಯಾಂಡಲ್ ವುಡ್ ನಲ್ಲಿ ಗಂಡುಗಲಿ ನಿರ್ಮಾಪಕ ಅಂತಾಲೇ ಹೆಸರು ಪಡೆದಿರುವ ನಿರ್ಮಾಪಕ ಕೆ.ಮಂಜು ಅವರ ಮಗನನ್ನ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ ಎಂಬ ಸುದ್ದಿಯಾಗಿತ್ತು. ಇದೀಗ, ಈ ಚಿತ್ರಕ್ಕೆ ಟೈಟಲ್ ಕೂಡ ಅಂತಿಮವಾಗಿದೆ.
ಕೆ ಮಂಜು ಅವರ ಮಗ ಶ್ರೇಯಸ್ ಅಭಿನಯಿಸಲಿರುವ ಚೊಚ್ಚಲ ಚಿತ್ರಕ್ಕೆ 'ಪಡ್ಡೆಹುಲಿ' ಎಂದು ನಾಮಕರಣ ಮಾಡಲಾಗಿದೆ. ಪಡ್ಡೆಹುಲಿ ಅಂದಾಕ್ಷಣ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಜಾಹುಲಿ' ಸಿನಿಮಾ ನೆನಪಾಗುತ್ತಿದದೆ ಅಲ್ವಾ.! ಅಂದ್ಹಾಗೆ, 'ರಾಜಾಹುಲಿ' ಚಿತ್ರವನ್ನ ಕೂಡ ಇದೇ ಕೆ ಮಂಜು ನಿರ್ಮಾಣ ಮಾಡಿದ್ದರು. ಇದೀಗ, ಮಗನ ಚಿತ್ರಕ್ಕೆ ಹುಲಿ ಅಂತ ಹೆಸರಿಟ್ಟಿದ್ದು, ದೊಡ್ಡ ಸೌಂಡ್ ಮಾಡುವ ನಿರೀಕ್ಷೆ ಹುಟ್ಟಿಸಿದೆ.
ಹೊಸ ವರ್ಷಕ್ಕೆ ಸ್ಯಾಂಡಲ್ ವುಡ್ ಗೆ ಹೊಸ ನಾಯಕನ ಎಂಟ್ರಿ
'ರಾಜಾಹುಲಿ' ಚಿತ್ರವನ್ನ ನಿರ್ದೇಶನ ಮಾಡಿದ್ದ ಗುರುದೇಶಪಾಂಡೆ ಈ ಪಡ್ಡೆಹುಲಿ ಚಿತ್ರಕ್ಕೂ ಆಕ್ಷನ್ ಕಟ್ ಹೇಳಲಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕ ಚಿತ್ರವನ್ನ ಈಗಿನ ಜನರೇಷನ್ ಯುವಕನಿಂದ ನೋಡಲು ಸಾಧ್ಯವೆಂದು ಈ ಕಥೆ ಮಾಡಿದ್ದಾರಂತೆ.
ಇನ್ನು ವಿಶೇಷ ಅಂದ್ರೆ, ನಿರ್ಮಾಪಕ ಕೆ ಮಂಜು ಅವರ ಮಗನ ಎಂಟ್ರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶುಭಕೋರಿದ್ದಾರೆ. ಟ್ವಿಟ್ಟರ್ ನಲ್ಲಿ ಶ್ರೇಯಸ್ ಗೆ ಸ್ವಾಗತ ಕೋರಿರುವ ಕಿಚ್ಚ, ಈ ಚಿತ್ರಕ್ಕೆ ಒಳ್ಳೆಯದಾಗಲಿ, ಈ ಯುವಕ ಮಿಂಚಲಿ ಎಂದು ಆಶಿಸಿದ್ದಾರೆ.
ಸದ್ಯ, ಚಿತ್ರಕಥೆ ಮತ್ತು ನಾಯಕನನ್ನ ನಿಗಧಿ ಮಾಡಿಕೊಂಡಿರುವ ಚಿತ್ರತಂಡ, ಕನ್ನಡದ ಹುಡುಗಿಯನ್ನೇ ನಾಯಕಿಯನ್ನಾಗಿಸಲು ಚಿಂತಿಸಿದೆಯಂತೆ. ಎಲ್ಲ ಅಂದುಕೊಂಡಂತೆ ಆದ್ರೆ, ಮುಂದಿನ ತಿಂಗಳು ಈ ಸಿನಿಮಾ ಸೆಟ್ಟೇರಲಿದೆಯಂತೆ.