Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆ ಮಂಜು ಮಗನ ಸಿನಿಮಾ ಎಂಟ್ರಿಗೆ ಕಿಚ್ಚನಿಂದ ಸ್ವಾಗತ
ಸ್ಯಾಂಡಲ್ ವುಡ್ ನಲ್ಲಿ ಗಂಡುಗಲಿ ನಿರ್ಮಾಪಕ ಅಂತಾಲೇ ಹೆಸರು ಪಡೆದಿರುವ ನಿರ್ಮಾಪಕ ಕೆ.ಮಂಜು ಅವರ ಮಗನನ್ನ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ ಎಂಬ ಸುದ್ದಿಯಾಗಿತ್ತು. ಇದೀಗ, ಈ ಚಿತ್ರಕ್ಕೆ ಟೈಟಲ್ ಕೂಡ ಅಂತಿಮವಾಗಿದೆ.
ಕೆ ಮಂಜು ಅವರ ಮಗ ಶ್ರೇಯಸ್ ಅಭಿನಯಿಸಲಿರುವ ಚೊಚ್ಚಲ ಚಿತ್ರಕ್ಕೆ 'ಪಡ್ಡೆಹುಲಿ' ಎಂದು ನಾಮಕರಣ ಮಾಡಲಾಗಿದೆ. ಪಡ್ಡೆಹುಲಿ ಅಂದಾಕ್ಷಣ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಜಾಹುಲಿ' ಸಿನಿಮಾ ನೆನಪಾಗುತ್ತಿದದೆ ಅಲ್ವಾ.! ಅಂದ್ಹಾಗೆ, 'ರಾಜಾಹುಲಿ' ಚಿತ್ರವನ್ನ ಕೂಡ ಇದೇ ಕೆ ಮಂಜು ನಿರ್ಮಾಣ ಮಾಡಿದ್ದರು. ಇದೀಗ, ಮಗನ ಚಿತ್ರಕ್ಕೆ ಹುಲಿ ಅಂತ ಹೆಸರಿಟ್ಟಿದ್ದು, ದೊಡ್ಡ ಸೌಂಡ್ ಮಾಡುವ ನಿರೀಕ್ಷೆ ಹುಟ್ಟಿಸಿದೆ.
ಹೊಸ ವರ್ಷಕ್ಕೆ ಸ್ಯಾಂಡಲ್ ವುಡ್ ಗೆ ಹೊಸ ನಾಯಕನ ಎಂಟ್ರಿ
'ರಾಜಾಹುಲಿ' ಚಿತ್ರವನ್ನ ನಿರ್ದೇಶನ ಮಾಡಿದ್ದ ಗುರುದೇಶಪಾಂಡೆ ಈ ಪಡ್ಡೆಹುಲಿ ಚಿತ್ರಕ್ಕೂ ಆಕ್ಷನ್ ಕಟ್ ಹೇಳಲಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕ ಚಿತ್ರವನ್ನ ಈಗಿನ ಜನರೇಷನ್ ಯುವಕನಿಂದ ನೋಡಲು ಸಾಧ್ಯವೆಂದು ಈ ಕಥೆ ಮಾಡಿದ್ದಾರಂತೆ.
ಇನ್ನು ವಿಶೇಷ ಅಂದ್ರೆ, ನಿರ್ಮಾಪಕ ಕೆ ಮಂಜು ಅವರ ಮಗನ ಎಂಟ್ರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶುಭಕೋರಿದ್ದಾರೆ. ಟ್ವಿಟ್ಟರ್ ನಲ್ಲಿ ಶ್ರೇಯಸ್ ಗೆ ಸ್ವಾಗತ ಕೋರಿರುವ ಕಿಚ್ಚ, ಈ ಚಿತ್ರಕ್ಕೆ ಒಳ್ಳೆಯದಾಗಲಿ, ಈ ಯುವಕ ಮಿಂಚಲಿ ಎಂದು ಆಶಿಸಿದ್ದಾರೆ.
ಸದ್ಯ, ಚಿತ್ರಕಥೆ ಮತ್ತು ನಾಯಕನನ್ನ ನಿಗಧಿ ಮಾಡಿಕೊಂಡಿರುವ ಚಿತ್ರತಂಡ, ಕನ್ನಡದ ಹುಡುಗಿಯನ್ನೇ ನಾಯಕಿಯನ್ನಾಗಿಸಲು ಚಿಂತಿಸಿದೆಯಂತೆ. ಎಲ್ಲ ಅಂದುಕೊಂಡಂತೆ ಆದ್ರೆ, ಮುಂದಿನ ತಿಂಗಳು ಈ ಸಿನಿಮಾ ಸೆಟ್ಟೇರಲಿದೆಯಂತೆ.