Don't Miss!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- News Bride Kidnap Video: ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವಿನ ಅಪಹರಣಕ್ಕೆ ಯತ್ನ: ವಿಡಿಯೋ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುನಿರತ್ನಗೆ ಕೊರೊನಾ, 'ಕ್ಷೇಮವಾಗಿ ಬಂದರೆ ನಿಮ್ಮ ಸೇವೆ...ಇಲ್ಲದಿದ್ದರೆ ಕ್ಷಮಿಸಿಬಿಡಿ'
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ.
Recommended Video
ಈ ಕುರಿತು ಸ್ವತಃ ಮುನಿರತ್ನ ಅವರೇ ಮಾಹಿತಿ ನೀಡಿದ್ದು, ''ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ' ಎಂದು ತಿಳಿಸಿದ್ದಾರೆ.
ಮುನಿರತ್ನಗೆ ಶುಭಾಶಯ: ವಿವಾದದ ಕುರಿತು ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿರುವ ಮುನಿರತ್ನ ಕೊನೆಯಲ್ಲಿ 'ಕ್ಷೇಮವಾಗಿ ಬಂದರೆ ನಿಮ್ಮ ಸೇವೆ....ಇಲ್ಲದಿದ್ದರೆ ಕ್ಷಮಿಸಿಬಿಡಿ...ಇಂತಿ ನಿಮ್ಮ ಸೇವಕ ಮುನಿರತ್ನ'' ಎಂದಿದ್ದಾರೆ.
ಈ ಸಾಲುಗಳ ಬಳಕೆ ಖಂಡಿಸಿರುವ ಕೆಲವರು ''ಕೊರೊನಾ ಬಗ್ಗೆ ಜನಕ್ಕೆ ತಿಳಿ ಹೇಳಬೇಕಾದ ನೀವುಗಳೆ ಹೀಗೆ ಹೇಳಿದರೆ ಹೇಗೆ ಮುನಿರತ್ನ ಸಾರ್.?'' ಎಂದು ಪ್ರಶ್ನಿಸಿದ್ದಾರೆ. ಅನೇಕರು ಮುನಿರತ್ನ ಅವರು ಬೇಗ ಚೇತರಿಸಿಕೊಂಡು ಬರಲಿ ಎಂದು ಹಾರೈಸಿದ್ದಾರೆ.
ಕೊನೆಯದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಕುರುಕ್ಷೇತ್ರ ಚಿತ್ರ ಮಾಡಿರುವ ಮುನಿರತ್ನ, ಸದ್ಯಕ್ಕೆ ರಾಜಕೀಯದ ಕಡೆ ಮಾತ್ರ ಹರಿಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆಗಾಗಿ ಎದುರು ನೋಡುತ್ತಿದ್ದಾರೆ.