Don't Miss!
- Automobiles Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದ್ಯೋಗ ಕೊಡಿಸುವುದಾಗಿ ವಂಚನೆ: ನಿರ್ಮಾಪಕ ಪ್ರಕಾಶ್ ಬಂಧನ
ಕೆಎಂಎಫ್ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ನಿರ್ಮಾಪಕ ಪ್ರಕಾಶ್ ಅನ್ನು ಬೆಂಗಳೂರಿನ ಆಡುಗೊಡಿ ಪೊಲೀಸರು ಬಂಧಿಸಿದ್ದಾರೆ.
ಕೆಎಂಎಫ್ ನಲ್ಲಿ ತಾಂತ್ರಿಕ ಅಧಿಕಾರಿಯ ಹುದ್ದೆಕೊಡಿಸುವುದಾಗಿ ಹೇಳಿದ್ದ ನಿರ್ಮಾಪಕ ಪ್ರಕಾಶ್ ಚಿಕ್ಕಬಳ್ಳಾಪುರ ಮೂಲದ ಚರಣ್ ಹೆಸರಿನ ವ್ಯಕ್ತಿಯೊಬ್ಬರಿಂದ ಸುಮಾರು 10 ಲಕ್ಷ ಹಣ ಪಡೆದಿದ್ದರು. ಬಳಿಕ ಆ ವ್ಯಕ್ತಿಗೆ ನಕಲಿ ಆದೇಶ ಪತ್ರ ನೀಡಿ ವಂಚನೆ ಮಾಡಿದ್ದರು.
ಕೆಎಂಎಫ್ನ ನಿರ್ದೇಶಕರ ನಕಲಿ ಸಹಿ, ಲಾಂಛನ, ಸೀಲ್ಗಳನ್ನೆಲ್ಲ ಬಳಸಿ ಪ್ರಕಾಶ್ ನಕಲಿ ಉದ್ಯೋಗ ಪತ್ರ ತಯಾರಿಸಿದ್ದರು. ನಕಲಿ ಉದ್ಯೋಗ ಪತ್ರ ಹಿಡಿದು ಚರಣ್ ಕೆಎಂಎಫ್ಗೆ ಹೋದಾಗ ಪ್ರಕಾಶ್ನ ನಕಲಿತನ ಬಯಲಾಗಿದೆ.
ನಿರ್ದೇಶಕರ ಸಹಿ, ಸೀಲ್ಗಳನ್ನು ಫೋರ್ಜರಿ ಮಾಡಿರುವುದು ಗೊತ್ತಾಗುತ್ತಿದ್ದಂತೆ ಕೆಎಂಎಫ್ನ ಸಿಬ್ಬಂದಿ ಆಡುಗೊಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚರಣ್ ವಿಚಾರಣೆ ನಡೆಸಿದ ಪೊಲೀಸರು ಫೋರ್ಜರಿ ಮಾಡಿದ ಹಾಗೂ ಹತ್ತು ಲಕ್ಷ ಹಣ ವಂಚನೆ ಮಾಡಿದ ಆರೋಪದಲ್ಲಿ ನಿರ್ಮಾಪಕ ಪ್ರಕಾಶ್ನನ್ನು ಬಂಧಿಸಿದ್ದಾರೆ.
ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ 'ಶಭಾಷ್ ಬಡ್ಡಿ ಮಗನೇ' ಸಿನಿಮಾವನ್ನು ಪ್ರಕಾಶ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಈಗ ಪೊಲೀಸರ ಅತಿಥಿಯಾಗಿದ್ದಾರೆ.