Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದ್ಯೋಗ ಕೊಡಿಸುವುದಾಗಿ ವಂಚನೆ: ನಿರ್ಮಾಪಕ ಪ್ರಕಾಶ್ ಬಂಧನ
ಕೆಎಂಎಫ್ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ನಿರ್ಮಾಪಕ ಪ್ರಕಾಶ್ ಅನ್ನು ಬೆಂಗಳೂರಿನ ಆಡುಗೊಡಿ ಪೊಲೀಸರು ಬಂಧಿಸಿದ್ದಾರೆ.
ಕೆಎಂಎಫ್ ನಲ್ಲಿ ತಾಂತ್ರಿಕ ಅಧಿಕಾರಿಯ ಹುದ್ದೆಕೊಡಿಸುವುದಾಗಿ ಹೇಳಿದ್ದ ನಿರ್ಮಾಪಕ ಪ್ರಕಾಶ್ ಚಿಕ್ಕಬಳ್ಳಾಪುರ ಮೂಲದ ಚರಣ್ ಹೆಸರಿನ ವ್ಯಕ್ತಿಯೊಬ್ಬರಿಂದ ಸುಮಾರು 10 ಲಕ್ಷ ಹಣ ಪಡೆದಿದ್ದರು. ಬಳಿಕ ಆ ವ್ಯಕ್ತಿಗೆ ನಕಲಿ ಆದೇಶ ಪತ್ರ ನೀಡಿ ವಂಚನೆ ಮಾಡಿದ್ದರು.
ಕೆಎಂಎಫ್ನ ನಿರ್ದೇಶಕರ ನಕಲಿ ಸಹಿ, ಲಾಂಛನ, ಸೀಲ್ಗಳನ್ನೆಲ್ಲ ಬಳಸಿ ಪ್ರಕಾಶ್ ನಕಲಿ ಉದ್ಯೋಗ ಪತ್ರ ತಯಾರಿಸಿದ್ದರು. ನಕಲಿ ಉದ್ಯೋಗ ಪತ್ರ ಹಿಡಿದು ಚರಣ್ ಕೆಎಂಎಫ್ಗೆ ಹೋದಾಗ ಪ್ರಕಾಶ್ನ ನಕಲಿತನ ಬಯಲಾಗಿದೆ.
ನಿರ್ದೇಶಕರ ಸಹಿ, ಸೀಲ್ಗಳನ್ನು ಫೋರ್ಜರಿ ಮಾಡಿರುವುದು ಗೊತ್ತಾಗುತ್ತಿದ್ದಂತೆ ಕೆಎಂಎಫ್ನ ಸಿಬ್ಬಂದಿ ಆಡುಗೊಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚರಣ್ ವಿಚಾರಣೆ ನಡೆಸಿದ ಪೊಲೀಸರು ಫೋರ್ಜರಿ ಮಾಡಿದ ಹಾಗೂ ಹತ್ತು ಲಕ್ಷ ಹಣ ವಂಚನೆ ಮಾಡಿದ ಆರೋಪದಲ್ಲಿ ನಿರ್ಮಾಪಕ ಪ್ರಕಾಶ್ನನ್ನು ಬಂಧಿಸಿದ್ದಾರೆ.
ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ 'ಶಭಾಷ್ ಬಡ್ಡಿ ಮಗನೇ' ಸಿನಿಮಾವನ್ನು ಪ್ರಕಾಶ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಈಗ ಪೊಲೀಸರ ಅತಿಥಿಯಾಗಿದ್ದಾರೆ.