Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಹಿತರಕ್ಷಣೆ ಕಾಪಾಡಲು 'ಪ್ರೊಡ್ಯೂಸರ್ ಪ್ರೊಟೆಕ್ಷನ್ ಕಮಿಟಿ' ರಚಿಸಲು ನಿರ್ಧಾರ
ರೆಬೆಲ್ ಸ್ಟಾರ್ ಅಂಬರೀಶ್ ಗೆ ಮೊಟ್ಟ ಮೊದಲ ಬಾರಿಗೆ ಸೋಲು ಉಂಟಾಗಿದೆ. ಫಿಲ್ಮ್ ಚೇಂಬರ್ ನಲ್ಲಿ ನಿನ್ನೆ ಸಂಜೆ ನಡೆದ ಸಂಧಾನ ಸಭೆ ವಿಫಲಗೊಂಡಿದೆ. ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ನಡುವೆ ಒಮ್ಮತ ಮೂಡಲಿಲ್ಲ. ಹೀಗಾಗಿ, ರಾಜಿ ಮಾತುಕತೆ ಮುರಿದುಬಿದ್ದಿದೆ.
ಸಂಧಾನ ಸಭೆ ವಿಫಲಗೊಂಡ ಹಿನ್ನಲೆ, #ಮೀಟೂ ಅಭಿಯಾನದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ಎಚ್ಚೆತ್ತುಕೊಂಡಿದೆ.
ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ.. ವೇಸ್ಟ್ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಶ್ರುತಿ ಹರಿಹರನ್.!
#ಮೀಟೂ ಅಭಿಯಾನದಿಂದ ಮುಂದೆ ಇಂಥ ವಿವಾದಗಳನ್ನು ತಡೆಯಲು, ನಿರ್ಮಾಪಕರ ಹಿತರಕ್ಷಣೆ ಕಾಪಾಡಲು 'ಪ್ರೊಡ್ಯೂಸರ್ ಪ್ರೊಟೆಕ್ಷನ್ ಕಮಿಟಿ' ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಅರ್ಜುನ್ ಸರ್ಜಾ-ಶ್ರುತಿ ಹರಿಹರನ್ ಸಂಧಾನ ವಿಫಲ: ಅಂಬಿ ಪ್ರಯತ್ನ ಫೇಲ್.!
ಮೂರು ದಿನಗಳಲ್ಲಿ 'ಪ್ರೊಡ್ಯೂಸರ್ ಪ್ರೊಟೆಕ್ಷನ್ ಕಮಿಟಿ' ರೂಪುರೇಷೆ ಸಿದ್ಧತೆಗೊಳ್ಳಲಿದೆ ಎಂದು ಫಿಲ್ಮ್ ಚೇಂಬರ್ ಮೂಲಗಳು ತಿಳಿಸಿವೆ.
ಸಂಧಾನದ ಮಾತೇ ಇಲ್ಲ, ಮನಸ್ಸಿನ ನೋವು ತೋಡಿಕೊಂಡ ಸರ್ಜಾ
ಅತ್ತ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ತಡೆಯಲು 'ಫೈರ್' ಸಂಸ್ಥೆ ರಚಿಸಲಾಗಿತ್ತು. ಆದ್ರೆ, ಪ್ರಿಯಾಂಕಾ ಉಪೇಂದ್ರ, ರೇಖಾ ರಾಣಿ, ವೀಣಾ ಸುಂದರ್, ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವರು 'ಫೈರ್' ಸಂಸ್ಥೆಯಿಂದ ಹೊರಗೆ ಬಂದಿದ್ದಾರೆ. ಹೀಗಾಗಿ 'ಫೈರ್' ಸಂಸ್ಥೆಗೆ ಆರಂಭದಲ್ಲೇ ಹಿನ್ನಡೆ ಉಂಟಾಗಿದೆ. ಒಟ್ನಲ್ಲಿ #ಮೀಟೂ ಅಭಿಯಾನದಿಂದ ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.