Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಹಿತರಕ್ಷಣೆ ಕಾಪಾಡಲು 'ಪ್ರೊಡ್ಯೂಸರ್ ಪ್ರೊಟೆಕ್ಷನ್ ಕಮಿಟಿ' ರಚಿಸಲು ನಿರ್ಧಾರ
ರೆಬೆಲ್ ಸ್ಟಾರ್ ಅಂಬರೀಶ್ ಗೆ ಮೊಟ್ಟ ಮೊದಲ ಬಾರಿಗೆ ಸೋಲು ಉಂಟಾಗಿದೆ. ಫಿಲ್ಮ್ ಚೇಂಬರ್ ನಲ್ಲಿ ನಿನ್ನೆ ಸಂಜೆ ನಡೆದ ಸಂಧಾನ ಸಭೆ ವಿಫಲಗೊಂಡಿದೆ. ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ನಡುವೆ ಒಮ್ಮತ ಮೂಡಲಿಲ್ಲ. ಹೀಗಾಗಿ, ರಾಜಿ ಮಾತುಕತೆ ಮುರಿದುಬಿದ್ದಿದೆ.
ಸಂಧಾನ ಸಭೆ ವಿಫಲಗೊಂಡ ಹಿನ್ನಲೆ, #ಮೀಟೂ ಅಭಿಯಾನದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ಎಚ್ಚೆತ್ತುಕೊಂಡಿದೆ.
ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ.. ವೇಸ್ಟ್ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಶ್ರುತಿ ಹರಿಹರನ್.!
#ಮೀಟೂ ಅಭಿಯಾನದಿಂದ ಮುಂದೆ ಇಂಥ ವಿವಾದಗಳನ್ನು ತಡೆಯಲು, ನಿರ್ಮಾಪಕರ ಹಿತರಕ್ಷಣೆ ಕಾಪಾಡಲು 'ಪ್ರೊಡ್ಯೂಸರ್ ಪ್ರೊಟೆಕ್ಷನ್ ಕಮಿಟಿ' ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಅರ್ಜುನ್ ಸರ್ಜಾ-ಶ್ರುತಿ ಹರಿಹರನ್ ಸಂಧಾನ ವಿಫಲ: ಅಂಬಿ ಪ್ರಯತ್ನ ಫೇಲ್.!
ಮೂರು ದಿನಗಳಲ್ಲಿ 'ಪ್ರೊಡ್ಯೂಸರ್ ಪ್ರೊಟೆಕ್ಷನ್ ಕಮಿಟಿ' ರೂಪುರೇಷೆ ಸಿದ್ಧತೆಗೊಳ್ಳಲಿದೆ ಎಂದು ಫಿಲ್ಮ್ ಚೇಂಬರ್ ಮೂಲಗಳು ತಿಳಿಸಿವೆ.
ಸಂಧಾನದ ಮಾತೇ ಇಲ್ಲ, ಮನಸ್ಸಿನ ನೋವು ತೋಡಿಕೊಂಡ ಸರ್ಜಾ
ಅತ್ತ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ತಡೆಯಲು 'ಫೈರ್' ಸಂಸ್ಥೆ ರಚಿಸಲಾಗಿತ್ತು. ಆದ್ರೆ, ಪ್ರಿಯಾಂಕಾ ಉಪೇಂದ್ರ, ರೇಖಾ ರಾಣಿ, ವೀಣಾ ಸುಂದರ್, ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವರು 'ಫೈರ್' ಸಂಸ್ಥೆಯಿಂದ ಹೊರಗೆ ಬಂದಿದ್ದಾರೆ. ಹೀಗಾಗಿ 'ಫೈರ್' ಸಂಸ್ಥೆಗೆ ಆರಂಭದಲ್ಲೇ ಹಿನ್ನಡೆ ಉಂಟಾಗಿದೆ. ಒಟ್ನಲ್ಲಿ #ಮೀಟೂ ಅಭಿಯಾನದಿಂದ ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.