Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆ ಮೇಲೆ ಬರಲಿದ್ಯಂತೆ ನಟಿ 'ಸೌಂದರ್ಯ' ಜೀವನ ಕಥೆ
ನಟಿ ಸೌಂದರ್ಯ ಇಡೀ ಕನ್ನಡ ಸಿನಿಮಾ ಅಭಿಮಾನಿಗಳನ್ನು ಅಗಲಿ ಸಾಕಷ್ಟು ವರ್ಷಗಳು ಕಳೆದಿವೆ. ಮುದ್ದಾದ ನಗುವಿನಿಂದಲೇ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದ ಸೌಂದರ್ಯ ಅವರ ಜೀವನ ಕಥೆ ತೆರೆ ಮೇಲೆ ತರುವ ಪ್ರಯತ್ನ ನಡೆಯುತ್ತಿದೆಯಂತೆ.
ಮಹಾನಟಿ ಸಿನಿಮಾ ಬಿಡುಗಡೆ ಆಗಿ ಪ್ರಖ್ಯಾತಿ ಪಡೆದುಕೊಂಡಿರುವುದೇ ಇದಕ್ಕೆ ಕಾರಣ. ಸಿನಿಮಾ ನಟಿ ಸಾವಿತ್ರಿ ಅವರ ಜೀವನ ಚರಿತ್ರೆಯನ್ನಿಟ್ಟುಕೊಂಡು ತಯಾರಾದ ಮಹಾನಟಿ ಸಿನಿಮಾವನ್ನ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
ನಟಿ ಸೌಂದರ್ಯರನ್ನು ಜೀವಂತವಾಗಿಟ್ಟ ಅತ್ತಿಗೆ ನಿರ್ಮಲಾ
ಅದರಂತೆಯೇ ಸೌಂದರ್ಯ ಅವರ ಕಥೆಯನ್ನು ತೆರೆ ಮೇಲೆ ತಂದರೆ ಜನರು ಇಷ್ಟ ಪಡುತ್ತಾರೆ ಎನ್ನುವ ಲೆಕ್ಕಾಚಾರ ನಿರ್ಮಾಪಕರದ್ದು. ತೆಲುಗಿನಲ್ಲಿ ಪೆಳ್ಳಿಚೂಪುಲು, ಮೆಂಟಲ್ ಮಧಿಲೋ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ರಾಜ್, ಸೌಂದರ್ಯ ಅವರ ಕಥೆಯನ್ನು ತೆರೆ ಮೇಲೆ ತರಲು ಉತ್ಸಾಹ ತೋರಿಸಿದ್ದಾರೆ.
ಸದ್ಯ ಈ ಬಗ್ಗೆ ಆಲೋಚನೆ ಮಾಡಿರುವ ನಿರ್ಮಾಪಕ ರಾಜ್ ಸೌಂದರ್ಯ ಅವರ ಮನೆಯವರ ಅನುಮತಿ ಪಡೆದುಕೊಂಡ ನಂತರ ಚಿತ್ರವನ್ನ ನಿರ್ಮಾಣ ಮಾಡುವ ತಯಾರಿ ಮಾಡಿಕೊಳ್ಳಲಿದ್ದಾರೆ. ಹಾಗೆನಾದರೂ ಸೌಂದರ್ಯ ಅವರ ಜೀವನ ಕಥೆ ತೆರೆ ಮೇಲೆ ಬಂದರೆ ನಾಯಕಿ ಯಾರಾಗುತ್ತಾರೆ ಎನ್ನುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.