Don't Miss!
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆ ಮೇಲೆ ಬರಲಿದ್ಯಂತೆ ನಟಿ 'ಸೌಂದರ್ಯ' ಜೀವನ ಕಥೆ
ನಟಿ ಸೌಂದರ್ಯ ಇಡೀ ಕನ್ನಡ ಸಿನಿಮಾ ಅಭಿಮಾನಿಗಳನ್ನು ಅಗಲಿ ಸಾಕಷ್ಟು ವರ್ಷಗಳು ಕಳೆದಿವೆ. ಮುದ್ದಾದ ನಗುವಿನಿಂದಲೇ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದ ಸೌಂದರ್ಯ ಅವರ ಜೀವನ ಕಥೆ ತೆರೆ ಮೇಲೆ ತರುವ ಪ್ರಯತ್ನ ನಡೆಯುತ್ತಿದೆಯಂತೆ.
ಮಹಾನಟಿ ಸಿನಿಮಾ ಬಿಡುಗಡೆ ಆಗಿ ಪ್ರಖ್ಯಾತಿ ಪಡೆದುಕೊಂಡಿರುವುದೇ ಇದಕ್ಕೆ ಕಾರಣ. ಸಿನಿಮಾ ನಟಿ ಸಾವಿತ್ರಿ ಅವರ ಜೀವನ ಚರಿತ್ರೆಯನ್ನಿಟ್ಟುಕೊಂಡು ತಯಾರಾದ ಮಹಾನಟಿ ಸಿನಿಮಾವನ್ನ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
ನಟಿ ಸೌಂದರ್ಯರನ್ನು ಜೀವಂತವಾಗಿಟ್ಟ ಅತ್ತಿಗೆ ನಿರ್ಮಲಾ
ಅದರಂತೆಯೇ ಸೌಂದರ್ಯ ಅವರ ಕಥೆಯನ್ನು ತೆರೆ ಮೇಲೆ ತಂದರೆ ಜನರು ಇಷ್ಟ ಪಡುತ್ತಾರೆ ಎನ್ನುವ ಲೆಕ್ಕಾಚಾರ ನಿರ್ಮಾಪಕರದ್ದು. ತೆಲುಗಿನಲ್ಲಿ ಪೆಳ್ಳಿಚೂಪುಲು, ಮೆಂಟಲ್ ಮಧಿಲೋ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ರಾಜ್, ಸೌಂದರ್ಯ ಅವರ ಕಥೆಯನ್ನು ತೆರೆ ಮೇಲೆ ತರಲು ಉತ್ಸಾಹ ತೋರಿಸಿದ್ದಾರೆ.
ಸದ್ಯ ಈ ಬಗ್ಗೆ ಆಲೋಚನೆ ಮಾಡಿರುವ ನಿರ್ಮಾಪಕ ರಾಜ್ ಸೌಂದರ್ಯ ಅವರ ಮನೆಯವರ ಅನುಮತಿ ಪಡೆದುಕೊಂಡ ನಂತರ ಚಿತ್ರವನ್ನ ನಿರ್ಮಾಣ ಮಾಡುವ ತಯಾರಿ ಮಾಡಿಕೊಳ್ಳಲಿದ್ದಾರೆ. ಹಾಗೆನಾದರೂ ಸೌಂದರ್ಯ ಅವರ ಜೀವನ ಕಥೆ ತೆರೆ ಮೇಲೆ ಬಂದರೆ ನಾಯಕಿ ಯಾರಾಗುತ್ತಾರೆ ಎನ್ನುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.