Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆ ಮೇಲೆ ಬರಲಿದ್ಯಂತೆ ನಟಿ 'ಸೌಂದರ್ಯ' ಜೀವನ ಕಥೆ
ನಟಿ ಸೌಂದರ್ಯ ಇಡೀ ಕನ್ನಡ ಸಿನಿಮಾ ಅಭಿಮಾನಿಗಳನ್ನು ಅಗಲಿ ಸಾಕಷ್ಟು ವರ್ಷಗಳು ಕಳೆದಿವೆ. ಮುದ್ದಾದ ನಗುವಿನಿಂದಲೇ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದ ಸೌಂದರ್ಯ ಅವರ ಜೀವನ ಕಥೆ ತೆರೆ ಮೇಲೆ ತರುವ ಪ್ರಯತ್ನ ನಡೆಯುತ್ತಿದೆಯಂತೆ.
ಮಹಾನಟಿ ಸಿನಿಮಾ ಬಿಡುಗಡೆ ಆಗಿ ಪ್ರಖ್ಯಾತಿ ಪಡೆದುಕೊಂಡಿರುವುದೇ ಇದಕ್ಕೆ ಕಾರಣ. ಸಿನಿಮಾ ನಟಿ ಸಾವಿತ್ರಿ ಅವರ ಜೀವನ ಚರಿತ್ರೆಯನ್ನಿಟ್ಟುಕೊಂಡು ತಯಾರಾದ ಮಹಾನಟಿ ಸಿನಿಮಾವನ್ನ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
ನಟಿ ಸೌಂದರ್ಯರನ್ನು ಜೀವಂತವಾಗಿಟ್ಟ ಅತ್ತಿಗೆ ನಿರ್ಮಲಾ
ಅದರಂತೆಯೇ ಸೌಂದರ್ಯ ಅವರ ಕಥೆಯನ್ನು ತೆರೆ ಮೇಲೆ ತಂದರೆ ಜನರು ಇಷ್ಟ ಪಡುತ್ತಾರೆ ಎನ್ನುವ ಲೆಕ್ಕಾಚಾರ ನಿರ್ಮಾಪಕರದ್ದು. ತೆಲುಗಿನಲ್ಲಿ ಪೆಳ್ಳಿಚೂಪುಲು, ಮೆಂಟಲ್ ಮಧಿಲೋ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ರಾಜ್, ಸೌಂದರ್ಯ ಅವರ ಕಥೆಯನ್ನು ತೆರೆ ಮೇಲೆ ತರಲು ಉತ್ಸಾಹ ತೋರಿಸಿದ್ದಾರೆ.
ಸದ್ಯ ಈ ಬಗ್ಗೆ ಆಲೋಚನೆ ಮಾಡಿರುವ ನಿರ್ಮಾಪಕ ರಾಜ್ ಸೌಂದರ್ಯ ಅವರ ಮನೆಯವರ ಅನುಮತಿ ಪಡೆದುಕೊಂಡ ನಂತರ ಚಿತ್ರವನ್ನ ನಿರ್ಮಾಣ ಮಾಡುವ ತಯಾರಿ ಮಾಡಿಕೊಳ್ಳಲಿದ್ದಾರೆ. ಹಾಗೆನಾದರೂ ಸೌಂದರ್ಯ ಅವರ ಜೀವನ ಕಥೆ ತೆರೆ ಮೇಲೆ ಬಂದರೆ ನಾಯಕಿ ಯಾರಾಗುತ್ತಾರೆ ಎನ್ನುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.