Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಣೆಯಾಗಿದ್ದ ಪ್ರಸಿದ್ಧ ನಿರ್ಮಾಪಕ ಶವವಾಗಿ ಪತ್ತೆ
ಜುಲೈ 8ರಂದು ಮುಂಜಾನೆ ವಾಯುವಿಹಾರಕ್ಕೆಂದು ತೆರಳಿದ ರವಿಶಂಕರ್ ಕಾಣೆಯಾಗಿದ್ದರು. ಆಗ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ದಕ್ಷಿಣದ ಖ್ಯಾತ ನಿರ್ಮಾಪಕ ಎಲ್ ವಿ ಪ್ರಸಾದ್ ಅವರ ಮೊಮ್ಮಗ ರವಿಶಂಕರ್ ಪ್ರಸಾದ್.
ರವಿಶಂಕರ್ ಅವರು ಇದುವರೆಗೂ ತೆಲುಗಿನಲ್ಲಿ ಶಂಕರ್ ದಾದಾ ಎಂಬಿಬಿಎಸ್, ಶಂಕರ್ ದಾದಾ ಜಿಂದಾಬಾದ್ ಹಾಗೂ ತಮಿಳಿನಲ್ಲಿ ಜೆಮಿನಿ ಫಿಲಂ ಸರ್ಕ್ಯೂಟ್ ಬ್ಯಾನರ್ ನಡಿ ವಸೂಲ್ ರಾಜಾ ಎಂಬಿಬಿಎಸ್ ಚಿತ್ರಗಳನ್ನು ನಿರ್ಮಿಸಿದ್ದಾರೆ.
ದಕ್ಷಿಣ ಭಾರತದ ಪ್ರಸಿದ್ಧ ನಿರ್ಮಾಣ ಸಂಸ್ಥೆ ಜೆಮಿನಿ ಫಿಲಂ ಸರ್ಕ್ಯೂಟ್ ಬ್ಯಾನರ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅವರು ಕೆಲಸ ಮಾಡುತ್ತಿದ್ದರು. ರೀಜೆನ್ಸಿ ಗ್ರೂಪ್ ಆಫ್ ಹೋಟೆಲ್ಸ್ ನ ಅಧ್ಯಕ್ಷರಾಗಿಯೂ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು.
ಈಗ ಅವರ ದೇಹ ಅನುಮಾನಾಸ್ಪದ ರೀತಿಯಲ್ಲಿ ದೊರಕಿದೆ. ಇದು ಹತ್ಯೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಇನ್ನಷ್ಟೇ ಬಗೆಹರಿಯಬೇಕಾಗಿದೆ. ವ್ಯಾಪಾರದಲ್ಲಿ ಏನಾದರೂ ನಷ್ಟ ಉಂಟಾಗಿದೆಯೇ? ಅಥವಾ ಕುಟುಂಬ ಸಮಸ್ಯೆಗಳೇನಾದರೂ ಇವೆಯೇ? ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.