Just In
- 46 min ago
'ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'- ನಟ ದರ್ಶನ್
- 49 min ago
ಕನ್ನಡದ ಮೊದಲ ವಾಕ್ಚಿತ್ರ 'ಸತಿ ಸುಲೋಚನ'ಕ್ಕೆ 88ನೇ ವರ್ಷದ ಸಂಭ್ರಮ
- 1 hr ago
ಬಾಲಿವುಡ್ ನಟಿ ತಾಪ್ಸಿ ಪನ್ನು ಮತ್ತು ಅನುರಾಗ್ ಕಶ್ಯಪ್ ಮನೆ ಮೇಲೆ ಐಟಿ ದಾಳಿ
- 1 hr ago
ಕನಸಿನ 'ಮಹಾಭಾರತ' ಚಿತ್ರದಿಂದ ಹಿಂದೆ ಸರಿದ ಆಮೀರ್: ವರ್ಷಗಳಿಂದ ಸಂಶೋಧನೆ ನಡೆಸಿ ಸಿನಿಮಾ ಕೈಬಿಟ್ಟಿದ್ದೇಕೆ?
Don't Miss!
- Automobiles
ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ
- Sports
ಫಿಟ್ನೆಸ್ ಟೆಸ್ಟ್ನಲ್ಲಿ ಫೇಲ್ ಆದ ತೆವಾಟಿಯಾ: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಅನುಮಾನ!
- News
ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ
- Education
NDRI Recruitment 2021: ಎಕ್ಸಿಕ್ಯುಟಿವ್ ಮತ್ತು ಸಿಇಓ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
Wome's Day Special: ಮಿಶೆಲ್ ಒಬಾಮ ಹೇಳಿದ ಈ 7 ವಿಷಯ ಪಾಲಿಸಿದರೆ ಆ ಮಹಿಳೆಗೆ ಸಕ್ಸಸ್ ಗ್ಯಾರಂಟಿ
- Finance
ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 03ರ ಪೆಟ್ರೋಲ್, ಡೀಸೆಲ್ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ರಣವಿಕ್ರಮ' ಬಳಿಕ ಮತ್ತೆ ಪುನೀತ್ ಜೊತೆ ಪವನ್ ಒಡೆಯರ್ ಸಿನಿಮಾ

ನಿರ್ದೇಶಕ ಪವನ್ ಓಡೆಯರ್ ಇತ್ತೀಚಿಗಷ್ಟೆ ನಟ ದರ್ಶನ್ ಜೊತೆಗೆ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಆ ಬಳಿಕ ಅಂಬರೀಶ್ ಪುತ್ರನಿಗೆ ಪವನ್ ಓಡೆಯರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಮತ್ತೆ ಪವನ್ ಓಡೆಯರ್ ತಮ್ಮ ಸಿನಿಮಾ ಮೂಲಕ ಸುದ್ದಿ ಮಾಡುತ್ತಿದ್ದಾರೆ.
ಪವನ್ ಒಡೆಯರ್ ನಿರ್ದೇಶಕರಾಗಿದ್ದರ ಹಿಂದಿನ ಒಂದು ಕುತೂಹಲಕಾರಿ ಕಥೆ
ಪವನ್ ಓಡೆಯರ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸಿನಿಮಾ ನಿರ್ದೇಶನ ಮಾಡಲಿದ್ದಾರಂತೆ. ಈ ಹಿಂದೆ ಪುನೀತ್ ಮತ್ತು ಪವನ್ ಒಡೆಯರ್ ಕಾಂಬಿನೇಶನ್ ನಲ್ಲಿ ಬಂದಿದ್ದ 'ರಣವಿಕ್ರಮ' ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ನಂತರ ಮತ್ತೆ ಪವನ್ ಒಡೆಯರ್ ಪುನೀತ್ ರಾಜ್ ಕುಮಾರ್ ಜೊತೆಗೆ ಸಿನಿಮಾ ಮಾಡಲಿದ್ದಾರಂತೆ. ಪುನೀತ್ ಮತ್ತು ಪವನ್ ಒಡೆಯರ್ ಚಿತ್ರದ ಬಗ್ಗೆ ರಾಕ್ ಲೈನ್ ವೆಂಕಟೇಶ್ ಹೇಳಿಕೊಂಡಿದ್ದಾರೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಈ ಹೊಸ ಚಿತ್ರಕ್ಕೆ ಬಂಡವಾಳ ಹಾಕಲಿದ್ದಾರೆ.
ಸದ್ಯಕ್ಕೆ ಈ ಸಿನಿಮಾ ಬರುವುದು ಪಕ್ಕಾ ಆಗಿದೆ. ಆದರೆ ಚಿತ್ರದ ಮುಹೂರ್ತದ ದಿನ ಫಿಕ್ಸ್ ಆದ ನಂತರ ಚಿತ್ರದ ಇನಷ್ಟು ವಿಚಾರಗಳನ್ನು ಹೇಳುವುದಾಗಿ ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ 'ಅಂಜನಿಪುತ್ರ' ನಂತರ ಶಶಾಂಕ್ ನಿರ್ದೇಶನದ ಸಿನಿಮಾ ಮತ್ತು ಸಂತೋಷ್ ಆನಂದ್ ರಾಮ್ ಸಿನಿಮಾದಲ್ಲಿ ನಟಿಸಲಿದ್ದಾರೆ.