Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಣವಿಕ್ರಮ' ಬಳಿಕ ಮತ್ತೆ ಪುನೀತ್ ಜೊತೆ ಪವನ್ ಒಡೆಯರ್ ಸಿನಿಮಾ
Recommended Video
ನಿರ್ದೇಶಕ ಪವನ್ ಓಡೆಯರ್ ಇತ್ತೀಚಿಗಷ್ಟೆ ನಟ ದರ್ಶನ್ ಜೊತೆಗೆ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಆ ಬಳಿಕ ಅಂಬರೀಶ್ ಪುತ್ರನಿಗೆ ಪವನ್ ಓಡೆಯರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಮತ್ತೆ ಪವನ್ ಓಡೆಯರ್ ತಮ್ಮ ಸಿನಿಮಾ ಮೂಲಕ ಸುದ್ದಿ ಮಾಡುತ್ತಿದ್ದಾರೆ.
ಪವನ್ ಒಡೆಯರ್ ನಿರ್ದೇಶಕರಾಗಿದ್ದರ ಹಿಂದಿನ ಒಂದು ಕುತೂಹಲಕಾರಿ ಕಥೆ
ಪವನ್ ಓಡೆಯರ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸಿನಿಮಾ ನಿರ್ದೇಶನ ಮಾಡಲಿದ್ದಾರಂತೆ. ಈ ಹಿಂದೆ ಪುನೀತ್ ಮತ್ತು ಪವನ್ ಒಡೆಯರ್ ಕಾಂಬಿನೇಶನ್ ನಲ್ಲಿ ಬಂದಿದ್ದ 'ರಣವಿಕ್ರಮ' ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ನಂತರ ಮತ್ತೆ ಪವನ್ ಒಡೆಯರ್ ಪುನೀತ್ ರಾಜ್ ಕುಮಾರ್ ಜೊತೆಗೆ ಸಿನಿಮಾ ಮಾಡಲಿದ್ದಾರಂತೆ. ಪುನೀತ್ ಮತ್ತು ಪವನ್ ಒಡೆಯರ್ ಚಿತ್ರದ ಬಗ್ಗೆ ರಾಕ್ ಲೈನ್ ವೆಂಕಟೇಶ್ ಹೇಳಿಕೊಂಡಿದ್ದಾರೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಈ ಹೊಸ ಚಿತ್ರಕ್ಕೆ ಬಂಡವಾಳ ಹಾಕಲಿದ್ದಾರೆ.
ಸದ್ಯಕ್ಕೆ ಈ ಸಿನಿಮಾ ಬರುವುದು ಪಕ್ಕಾ ಆಗಿದೆ. ಆದರೆ ಚಿತ್ರದ ಮುಹೂರ್ತದ ದಿನ ಫಿಕ್ಸ್ ಆದ ನಂತರ ಚಿತ್ರದ ಇನಷ್ಟು ವಿಚಾರಗಳನ್ನು ಹೇಳುವುದಾಗಿ ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ 'ಅಂಜನಿಪುತ್ರ' ನಂತರ ಶಶಾಂಕ್ ನಿರ್ದೇಶನದ ಸಿನಿಮಾ ಮತ್ತು ಸಂತೋಷ್ ಆನಂದ್ ರಾಮ್ ಸಿನಿಮಾದಲ್ಲಿ ನಟಿಸಲಿದ್ದಾರೆ.