Don't Miss!
- News PSI Re-Exam: ಪಿಎಸ್ಐ ಮರುಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟ: CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ 'ಒಡೆಯ' ನಿರ್ಮಾಪಕ ಸಂದೇಶ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಒಡೆಯ ಚಿತ್ರದ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಕ್ಷಮೆ ಕೇಳಿದ್ದಾರೆ. ಡಿ-ಬಾಸ್ ಅಭಿಮಾನಿಗಳಿಗೆ ಕೊಟ್ಟ ಮಾತನ್ನ ತಪ್ಪಿದ್ದಕ್ಕಾಗಿ ಕ್ಷಮಿಸಿ ಎಂದು ವಿನಂತಿಸಿಕೊಂಡಿದ್ದಾರೆ.
ವಿಷಯ ಏನಪ್ಪಾ ಅಂದ್ರೆ, ವಿಜಯದಶಮಿ ಹಬ್ಬದ ಪ್ರಯುಕ್ತ ಒಡೆಯ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದರು. ಈ ಸುದ್ದಿ ಕೇಳಿ ಅಭಿಮಾನಿಗಳು ಕೂಡ ಬಕಪಕ್ಷಿಗಳಂತೆ ಕಾದು ಕುಂತಿದ್ದರು.
ಆದರೆ, ದಿನ ಮುಗಿದರೂ ಮೋಷನ್ ಪೋಸ್ಟರ್ ಮಾತ್ರ ಬರಲಿಲ್ಲ. ಇದು ಸಹಜವಾಗಿ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ನಿರ್ಮಾಪಕ ಸಂದೇಶ್ ನಾಗರಾಜ್ ''ತಾಂತ್ರಿಕ ಕಾರಣದಿಂದ ಪೋಸ್ಟರ್ ರಿಲೀಸ್ ಮಾಡಲು ಸಾಧ್ಯವಾಗಿಲ್ಲ'' ಎಂದು ತಿಳಿಸಿದ್ದಾರೆ.
ನಿರ್ಮಾಪಕರ
ಬೆನ್ನು
ತಟ್ಟಿದ
ಅಭಿಮಾನಿಗಳಿಗೆ
ಧನ್ಯವಾದ
ಹೇಳಿದ
ದಾಸ
.
''ಎಲ್ಲರಿಗೂ
ವಿಶೇಷ
ಸೂಚನೆ....
ವಿಜಯದಶಮಿ
ಪ್ರಯುಕ್ತ
ಬಿಡುಗಡೆಯಾಗಬೇಕಿದ್ದ
ನಮ್ಮ
ಡಿ
ಬಾಸ್
ರವರ
'ಒಡೆಯ'
ಚಿತ್ರದ
ಮೋಶನ್
ಪೋಸ್ಟರ್
ಅನ್ನು
ತಾಂತ್ರಿಕ
ಸಮಸ್ಯೆಗಳ
ಕಾರಣದಿಂದ
ಮುಂದೂಡಲಾಗಿದೆ.
ಇಷ್ಟರಲ್ಲೇ
ನಿಮಗೆ
ಬಿಡುಗಡೆಯ
ದಿನಾಂಕವನ್ನು
ತಿಳಿಸಲಾಗುವುದು
ಕ್ಷಮೆ
ಇರಲಿ
ಇಂತಿ
ನಿಮ್ಮ
ಸಂದೇಶ್''
ಎಂದು
ಫೇಸ್
ಬುಕ್
ನಲ್ಲಿ
ಬರೆದುಕೊಂಡಿದ್ದಾರೆ.
ಸಂದೇಶ್ ಅವರ ಈ ಪೋಸ್ಟ್ ಗೆ ಅಭಿಮಾನಿಗಳು ಬೇಸರದ ಜೊತೆ ಕೋಪವನ್ನ ವ್ಯಕ್ತಪಡಿಸಿದ್ದಾರೆ. 'ದಯವಿಟ್ಟು ತಡವಾಗಿಯೇ ರಿಲೀಸ್ ಮಾಡಿ, ಆದರೆ ದಿನಾಂಕವನ್ನ ಈಗಲೇ ಹೇಳಿ' ಎಂದು ಕೆಲವರು ಕೇಳುತ್ತಿದ್ದಾರೆ. 'ನೀವು ಸಿನಿಮಾನೂ ರಿಲೀಸ್ ಮಾಡಲ್ಲ ಬಿಡಿ' ಎಂದು ಗರಂ ಆಗಿದ್ದವರು ಇದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ನಟಿ ರಕ್ಷಿತಾ ಹೀಗೆ ಹೇಳಿದ್ದೇಕೆ?
ಸದ್ಯಕ್ಕೆ ಒಡೆಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ದಿನಾಂಕ ಯಾವಾಗ ಎಂಬುದು ಗೊತ್ತಿಲ್ಲ. ಅಂದ್ಹಾಗೆ, ಒಡೆಯ ಸಿನಿಮಾ ತಮಿಳಿನ ಸೂಪರ್ ಹಿಟ್ 'ವೀರಂ' ಚಿತ್ರದ ರೀಮೇಕ್. ಎಂ.ಡಿ ಶ್ರೀಧರ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ.