Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ವ್ಯೂಹದಲ್ಲಿ ಸಿಲುಕಿದ 'ಕೆಂಪೇಗೌಡ' ನಿರ್ಮಾಪಕ: ವಿಚಾರಣೆಗೆ ಹಾಜರು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಂಪೇಗೌಡ ಚಿತ್ರದ ನಿರ್ಮಾಪಕ ಶಂಕರ್ ಗೌಡ ನಿವಾಸ ಹಾಗೂ ಕಚೇರಿ ಮೇಲೆ ಗೋವಿಂದಪುರ ಪೊಲೀಸರು ದಾಳಿ ನಡೆಸಿ ಖಾಸಗಿ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ಕೇಸ್ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರ ಸೂಚನೆ ಹಿನ್ನೆಲೆ ಇನ್ಸ್ ಪೆಕ್ಟರ್ ಪ್ರಕಾಶ್, ಎಸಿಪಿ ಸಕ್ರಿ ಅವರ ಮುಂದೆ ಶಂಕರ್ ಗೌಡ ವಿಚಾರಣೆ ಎದುರಿಸಿದ್ದಾರೆ.
ಡ್ರಗ್ಸ್ ಪ್ರಕರಣ: 'ಕೆಂಪೇಗೌಡ-2' ಸಿನಿಮಾ ನಿರ್ಮಾಪಕನ ಮನೆ ಮೇಲೆ ದಾಳಿ
ಸುಮಾರು ಎರಡೂವರೆ ಗಂಟೆಗಳಿಂದ ನಿರಂತರವಾಗಿ ಶಂಕರ್ ಗೌಡ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಫೆಬ್ರವರಿ 8 ರಂದು ರಾತ್ರಿ ಸಂಜಯ್ ನಗರದ ಕಚೇರಿ ಮೇಲೆ ದಾಳಿ ಮಾಡಲಾಗಿತ್ತು. ಈ ವೇಳೆ ಶಂಕರ್ ಗೌಡ ಅವರ ಮೊಬೈಲ್, ಪೆನ್ ಡ್ರೈವ್, ಲ್ಯಾಪ್ ಟಾಪ್ ವಶಕ್ಕೆ ಪಡೆದುಕೊಂಡಿದ್ದರು.
ಅಂದ್ಹಾಗೆ, ಡ್ರಗ್ಸ್ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಅವರನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದರು. ಮಸ್ತಾನ್ ವಿಚಾರಣೆ ವೇಳೆ ಶಂಕರ್ ಗೌಡನ ಹೆಸರು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆ ಶಂಕರ್ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.
Recommended Video
ಈ ಹಿಂದೆ ಡ್ರಗ್ಸ್ ಜಾಲದಲ್ಲಿ ನಟಿ ರಾಗಿಣಿ, ಸಂಜನಾ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಡ್ರಗ್ಸ್ ತನಿಖೆ ತಣ್ಣಗಾಯಿತು ಎಂದು ಹೇಳಲಾಗುತ್ತಿತ್ತು. ಆದ್ರೆ, ಬೆಂಗಳೂರು ಪೊಲೀಸರು ಸ್ಯಾಂಡಲ್ವುಡ್ ಬೇಟೆ ಇನ್ನು ನಿಲ್ಲಿಸಿಲ್ಲ ಎನ್ನುವುದು ಶಂಕರ್ ಗೌಡ ಹಾಗೂ ಮಸ್ತಾನ್ ಘಟನೆಯಿಂದ ಗೊತ್ತಾಗುತ್ತಿದೆ.