Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ: ಪ್ರಕರಣ ದಾಖಲು
ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತೇಶ್, ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಎಂಬುವರ ಮನೆಗೆ ನುಗ್ಗಿ ಮನೆಕೆಲಸದವರ ಮೇಲೆ ಹಲ್ಲೆ ಮಾಡಿರುವ ಕುರಿತು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಈವರೆಗೆ ಯಾವ ಬಂಧನವೂ ಆಗಿಲ್ಲ.
ಸ್ನೇಹಿತೇಶ್, ರೇಖಾ ಜಗದೀಶ್ ಹಾಗೂ ಇನ್ನೂ ಕೆಲವು ಬೌನ್ಸರ್ಗಳು ಮಹಾಲಕ್ಷ್ಮಿ ಲೇಔಟ್ನ ತಮ್ಮ ಮನೆಯ ಪಕ್ಕದ ಮನೆಯಲ್ಲಿ ಕೆಲಸ ಮಾಡುತ್ತದ್ದ ಮಹಿಳೆಯರ ಮೇಲೆ ಹಲ್ಲೆ ಮಾಡಿ ಅವರ ಸೀರೆ ಎಳೆದಾಡಿದ್ದಾರೆ ಎಂದು ಅನುರಾಧಾ ಎಂಬುವರು ದೂರು ನೀಡಿದ್ದಾರೆ. ಘಟನೆ ಶನಿವಾರ ನಡೆದಿದ್ದು, ಅಂದೇ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸ್ನೇಹಿತೇಶ್ ಅನ್ನು ಬಂಧಿಸದಂತೆ ಕನ್ನಡದ ಸ್ಟಾರ್ ನಟ ಹಾಗೂ ನಿರ್ಮಾಪಕರೊಬ್ಬರು ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ, ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಆಗುವಂತೆ ರಜತ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತೇಶ್ ಹಾಗೂ ಅವನ ಬೌನ್ಸರ್ಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಏರಿಯಾದಲ್ಲಿಲ್ಲ. ಇನ್ನೂ ಚಿಕ್ಕ ಹುಡುಗ ಸ್ನೇಹಿತೇಶ್ ರೌಡಿಗಳನ್ನು ಜೊತೆಯಲ್ಲಿಟ್ಟುಕೊಂಡು ಓಡಾಡುತ್ತಾನೆ. ಅವನು ಕಾರು ತೆಗೆದರೆ ಸುತ್ತಲೂ ಕಾರುಗಳು, ಬೈಕ್ಗಳು ಇರುತ್ತವೆ, ಆತ ಬಂದನೆಂದರೆ ರಸ್ತೆ ಕ್ಲಿಯರ್ ಮಾಡಬೇಕು, ಯಾರಾದರೂ ಅಡ್ಡ ಬಂದರೆ ಹಲ್ಲೆ ಮಾಡುವುದು, ವಯಸ್ಸು ಸಹ ನೋಡದೆ ಕೆಟ್ಟದಾಗಿ ಬೈಯ್ಯುವುದು ಮಾಡುತ್ತಾರೆ. ವಿಲನ್ಗಳ ರೀತಿಯಲ್ಲಿ ವರ್ತಿಸುತ್ತಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಘಟನೆ ನಡೆದು ಮೂರು ದಿನವಾದ್ರೂ ಸ್ನೇಹಿತೇಶ್ ಆಗಲಿ ಆತನ ಬೌನ್ಸರ್ಗಳ ಮೇಲಾಗಲಿ ಈ ವೆರಗೆ ಕ್ರಮಜರುಗಿಸಿಲ್ಲ. ಈ ಬಗ್ಗೆ ಸ್ಥಳೀಯರೇ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ರಮ ಕೈಗೊಳ್ಳದ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಗರಂ ಆಗಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಎಚ್ಚರಿಕೆ ಬಳಿಕ ಪೊಲೀಸರು ನೊಟೀಸ್ ನೀಡಲು ಸೌಂದರ್ಯಾ ಜಗದೀಶ್ ಮನೆಗೆ ಭೇಟಿ ನೀಡಿದಾಗ ಪೊಲೀಸರಿಗೆ ಬಾಗಿಲು ತೆರೆಯದೇ ಡ್ರಾಮಾ ಮಾಡಿದ್ದಾರೆ. ಆ ನಂತರ ಬಾಗಿಲು ತೆರೆದು ವಿಚಾರಣೆಗೆ ಸಹಕರಿಸಿದ್ದಾರೆ. ಹಲ್ಲೆಯಲ್ಲಿ ಸೌಂದರ್ಯಾ ಜಗದೀಶ್ ಮನೆಯ ಕೆಲಸದಾಕೆ ಭುವನಾ ಎಂಬುವರೂ ಭಾಗಿಯಾಗಿದ್ದೂ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.