Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಪ್ರಿಯರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲಿದ್ದಾರೆ 'ರಾಬರ್ಟ್' ನಿರ್ಮಾಪಕ ಉಮಾಪತಿ
ಕರ್ನಾಟಕಕ್ಕೆ ತನ್ನದೇ ಆದ ಫಿಲಂ ಸಿಟಿ ಬೇಕು ಎನ್ನುವುದು ಹಲವು ವರ್ಷಗಳ ಕೂಗು. ಆದರೆ ಫಿಲಂ ಸಿಟಿಯನ್ನು ಎಲ್ಲಿ ಮಾಡಬೇಕು ಎನ್ನುವುದೇ ವಿವಾದವಾಗಿದೆ. ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಉತ್ತರ ಕರ್ನಾಟಕ ಹೀಗೆ ಅನೇಕ ಸ್ಥಳಗಳಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಬೇಡಿಕೆ ಇದೆ. ಹಾಗೆಯೇ ಪರಿಪೂರ್ಣ ವಾಣಿಜ್ಯ ಚಟುವಟಿಕೆಯಾದ ಚಿತ್ರರಂಗಕ್ಕೆ ಸರ್ಕಾರ ಏಕೆ ಫಿಲಂ ಸಿಟಿ ನಿರ್ಮಸಬೇಕು? ಚಿತ್ರರಂಗವೇ ನಿರ್ಮಿಸಿಕೊಳ್ಳಲಿ ಎಂಬ ಅಭಿಪ್ರಾಯವೂ ಇದೆ.
ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫಿಲಂ ಸಿಟಿ ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡಿದ ಬಳಿಕ ಈ ಚರ್ಚೆ ಮತ್ತೆ ಮುನ್ನೆಲೆ ಬಂದಿತ್ತು. ಆದರೆ ಇಂತಹ ಭರವಸೆಗಳನ್ನು ನೋಡುತ್ತಾ ಬಂದಿರುವ ಸಿನಿ ಪ್ರಿಯರಿಗೆ ಇದು ಸದ್ಯಕ್ಕೆ ಕೈಗೂಡುವ ಕಾರ್ಯವಲ್ಲ ಎನ್ನುವುದು ಅರಿವಾಗಿದೆ. ಇದರ ನಡುವೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ತಮ್ಮದೇ ಮಿನಿ ಫಿಲಂ ಸಿಟಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಫಿಲಂ ಸಿಟಿ ನಿರ್ಮಾಣದ ಹೊಣೆಗಾರಿಕೆ ಹೊರಲು ಸಿದ್ಧ ಎಂದ ಶಿವಣ್ಣ
ಉಮಾಪತಿ ಫಿಲಂ ಸಿಟಿ
'ರಾಬರ್ಟ್' ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಬೆಂಗಳೂರಿನ ಹೊರವಲಯದಲ್ಲಿ ಸಾಧ್ಯವಾದಷ್ಟು ಎಲ್ಲ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಮಿನಿ ಫಿಲಂ ಸಿಟಿಯನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದು ಚಿತ್ರರಂಗದ ಚಟುವಟಿಕೆಗಳಿಗೆ ಪೂರಕವಾಗಿರಲಿದೆ.
16 ಎಕರೆ ಭೂಮಿಯಲ್ಲಿ ಫಿಲಂ ಸಿಟಿ
ಕನಕಪುರ ರಸ್ತೆಯಲ್ಲಿ 16 ಎಕರೆ ಭೂಮಿಯನ್ನು ಕಾಯ್ದಿರಿಸಿರುವ ಉಮಾಪತಿ, ಸಿನಿಮಾ ಚಿತ್ರೀಕರಣ ನಡೆಸುವ ತಂಡಗಳಿಗೆ ಎಲ್ಲ ರೀತಿ ಸೌಲಭ್ಯಗಳನ್ನು ಒಂದೇ ಕಡೆ ಒದಗಿಸುವ ತುಡಿತ ಹೊಂದಿದ್ದಾರೆ. ರವಿಶಂಕರ್ ಅವರ ಅರ್ಟ್ಸ್ ಆಫ್ ಲಿವಿಂಗ್ ಸಮೀಪದಲ್ಲಿ ಈ ಫಿಲಂ ಸಿಟಿ ನಿರ್ಮಾಣವಾಗಲಿದೆ.
ತೆರಿಗೆದಾರರ ಹಣವನ್ನು ಚಿತ್ರೋದ್ಯಮದ ಮೇಲೆ ಸುರಿಯಬೇಕೇ? ಫಿಲಂ ಸಿಟಿ ಘೋಷಣೆಗೆ ಅಸಮಾಧಾನ
ಒಂದೇ ಸ್ಥಳದಲ್ಲಿ ಲಭ್ಯ
ಈ ಫಿಲಂ ಸಿಟಿಯಲ್ಲಿ ಆಸ್ಪತ್ರೆ, ರೈಲ್ವೆ ಸ್ಟೇಷನ್, ಹಳ್ಳಿ, ರಸ್ತೆ, ಐಷಾರಾಮಿ ಬಂಗಲೆ, ಹೀಗೆ ಸಿನಿಮಾಗಳ ಚಿತ್ರೀಕರಣಕ್ಕೆ ಏನೇನು ಅಗತ್ಯವಿದೆಯೋ ಅವೆಲ್ಲವನ್ನೂ ಒಂದೇ ಸ್ಥಳದಲ್ಲಿ ಒದಗಿಸಲು ಅವರು ಯೋಜನೆ ರೂಪಿಸಿದ್ದಾರೆ. ಫಿಲಂ ಸಿಟಿ ನಿರ್ಮಾಣಕ್ಕೆ ಅವರು ಬಹಳ ಹಿಂದೆಯೇ ಆಲೋಚಿಸಿದ್ದರು. ಅದೀಗ ಸಾಕಾರಗೊಳ್ಳುವ ಸಮಯ ಬಂದಿದೆ.
ಫಿಲ್ಮ್ ಸಿಟಿ ಮೈಸೂರಿನಲ್ಲಿ ಆದರೆ ಒಳ್ಳೆಯದು: ನಟ ಯಶ್
ರಾಮೋಜಿ ಫಿಲಂ ಸಿಟಿಗೆ ಹೋಗಬೇಕು
ಕರ್ನಾಟಕದಲ್ಲಿ ಸಿನಿಮಾ ನಿರ್ಮಾಣಕ್ಕೆ ಸರಿಯಾದ ಸೌಕರ್ಯಗಳಿಲ್ಲ. ಹೀಗಾಗಿ ಹೆಚ್ಚಿನ ಸಿನಿಮಾಗಳಿಗಾಗಿ ಹೈದರಾಬಾದ್ನ ರಾಮೋಜಿ ಫಿಲಂ ಸಿಟಿಗೆ ಹೋಗುವುದು ಅನಿವಾರ್ಯ. ಶೂಟಿಂಗ್ಗೆ ಹೋಗುವ ಚಿತ್ರತಂಡ ಅಲ್ಲಿಗೆ ತನ್ನ ಚಿತ್ರತಂಡವನ್ನು ಕರೆದೊಯ್ಯಬೇಕು ಮತ್ತು ಅನೇಕ ಕೆಲಸಗಳಿಗೆ ಅಲ್ಲಿನ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು. ಇದರಿಂದ ಹೆಚ್ಚಿನ ಅರ್ಥಿಕ ಹೊರೆಯಾಗುತ್ತದೆ. ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ನಿರ್ಮಾಣವಾದರೆ ಈ ಸಮಸ್ಯೆ ಕಡಿಮೆಯಾಗಲಿದೆ.