Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಉಪವಾಸ ಸತ್ಯಾಗ್ರಹ ; ಅಂಬರೀಶ್ ಹೊಸ ವರಸೆ
''ಖಾಸಗಿ ವಾಹಿನಿಗಳು ಕನ್ನಡ ಚಿತ್ರಗಳ ಸ್ಯಾಟೆಲೈಟ್ ಹಕ್ಕುಗಳನ್ನ ಕೊಂಡುಕೊಳ್ಳುತ್ತಾಯಿಲ್ಲ. ಸ್ಟಾರ್ ನಟರು ನಿರ್ಮಾಪಕರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಚಾನೆಲ್ ಗಳ ರಿಯಾಲಿಟಿ ಶೋನಲ್ಲಿ ಕಲಾವಿದರು ಭಾಗವಹಿಸುತ್ತಿದ್ದಾರೆ. ಇದರಿಂದ ಸಿನಿಮಾ ಕಲೆಕ್ಷನ್ ಡಲ್ ಆಗುತ್ತಿದೆ.''
ಇಂತಹ ಸಾಕಷ್ಟು ಕಾರಣಗಳನ್ನ ಕೊಟ್ಟು ಸಮಸ್ಯೆ ಪರಿಹಾರ ಆಗಬೇಕು ಅಂತ ಕಳೆದ 15 ದಿನಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕರು ಧರಣಿ ನಡೆಸುತ್ತಿದ್ದಾರೆ.
ಇಂದು ಜಯಸಿಂಹ ಮುಸುರಿ ನೇತೃತ್ವದಲ್ಲಿ ಮೂವರು ನಿರ್ಮಾಪಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದರೂ, ''ಪ್ರತಿಭಟನೆ ಸ್ಥಳಕ್ಕೆ ಹೋಗುವ ಪ್ರಶ್ನೆಯೇ ಇಲ್ಲ'' ಅಂತ ರೆಬೆಲ್ ಸ್ಟಾರ್ ಅಂಬರೀಶ್ ಖಾರವಾಗಿ ನುಡಿದಿದ್ದಾರೆ. [ರೆಬೆಲ್ ಸ್ಟಾರ್ ಅಂಬರೀಶ್ ತಂಟೆಗೆ ಬಂದ್ರೆ...ಹುಷಾರ್..!]
''ಮಾತುಕತೆಗೆ ಅಂತ ಕರೆದರೆ ಫಲಪ್ರದ ನಿರ್ಣಯ ಕೈಗೊಳ್ಳಬೇಕು. ಏಕಾಏಕಿ ಘೋಷಣೆ, ಧಿಕ್ಕಾರ ಕೂಗಿದರೆ ಯಾವುದೂ ಪರಿಹಾರ ಆಗಲ್ಲ. ಸಮಸ್ಯೆ ಇರುವವರೇ ನನ್ನ ಬಳಿ ಬಂದು ಚರ್ಚಿಸಲಿ. ನಾನಂತೂ ಹೋಗಲ್ಲ'' ಅಂತ ಅಂಬರೀಶ್ ಸ್ಪಷ್ಟವಾಗಿ ತಿಳಿಸಿದ್ದಾರೆ.
ಕಳೆದ ಭಾನುವಾರ ಅಂದ್ರೆ ಜೂನ್ 7 ರಂದು ಅಂಬರೀಶ್ ನೇತೃತ್ವದಲ್ಲಿ ಕಲಾವಿದರ ಸಂಘ ಸಭೆ ಕರೆದಿತ್ತು. ಸಭೆಯಲ್ಲಿ ಯಾವುದೇ ಸ್ಟಾರ್ ನಟರು ಭಾಗವಹಿಸಲಿಲ್ಲ. ಯಾವುದೇ ನಿರ್ಣಯ ಕೈಗೊಳ್ಳದೇ ಸಭೆ ವಿಫಲವಾದ ಕಾರಣಕ್ಕೆ ನಿರ್ಮಾಪಕರು ಅಂಬರೀಶ್ ವಿರುದ್ಧ ಧಿಕ್ಕಾರ ಕೂಗಿದರು. [''ರೆಬೆಲ್ ಸ್ಟಾರ್ ಅಂಬರೀಶ್ ಗೆ ಧಿಕ್ಕಾರ...ಧಿಕ್ಕಾರ...'']
ಇದನ್ನೇ ಕಾರಣವಾಗಿಟ್ಟುಕೊಂಡು, ಅಂಬರೀಶ್ ವಿರುದ್ಧ ಧಿಕ್ಕಾರ ಕೂಗಿದ ನಿರ್ಮಾಪಕರನ್ನ ಅಮಾನತುಗೊಳಿಸುವವರೆಗೂ ಸಮಸ್ಯೆ ಪರಿಹಾರ ಸಾಧ್ಯವಿಲ್ಲ ಅಂತ ಕಲಾವಿದರ ಸಂಘದ ಉಪಾಧ್ಯಕ್ಷ ರಾಕ್ ಲೈನ್ ವೆಂಕಟೇಶ್ ಹೇಳಿದ್ದರು. ಈಗ ಅಂಬರೀಶ್ ಹೊಸ ವರಸೆ ಶುರುಮಾಡಿದ್ದಾರೆ. [ಅಂಬಿ ಮಾತಿಗೆ 'ಇವರಿಂದ' ಕವಡೆ ಕಾಸಿನ ಕಿಮ್ಮತ್ತಿಲ್ಲ]
ಒಟ್ನಲ್ಲಿ 'ನಾ ಕೊಡೆ...ನೀ ಬಿಡೆ' ಅನ್ನುವ ಪರಿಸ್ಥಿತಿ ನಿರ್ಮಾಪಕರು ಮತ್ತು ಕಲಾವಿದರದ್ದು. ಇದು ಎಲ್ಲಿಯವರೆಗೆ ಹೋಗಿ ತಲುಪುತ್ತೋ ಕಾದು ನೋಡಿ....