Don't Miss!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- News Siddaramaiah campaign: ಬಾಗೇಪಲ್ಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಸಭೆ, ಡಿಕೆಶಿ ಭಾಗಿ
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದಿನಿಂದ ನಿರ್ಮಾಪಕರ ಸರಣಿ ಉಪವಾಸ ಸತ್ಯಾಗ್ರಹ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕಲಾವಿದರ ಸಂಘಕ್ಕೆ ನಿರ್ಮಾಪಕರು ನೀಡಿದ ಗಡುವು ಮುಗಿದಿದೆ. ನಿರ್ಮಾಪಕರು ಬೀದಿಗಿಳಿದು ಪ್ರತಿಭಟನೆ ಶುರುಮಾಡಿ ಹತ್ತು ದಿನಗಳಾಗಿವೆ. ಜೂನ್ 10 ರೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದೇ ಇದ್ದರೆ, ಕಠಿಣ ಹೋರಾಟ ಶುರುಮಾಡುವುದಾಗಿ ನಿರ್ಮಾಪಕರು ಎಚ್ಚರಿಕೆ ನೀಡಿದ್ದರು.
ಅದರಂತೆ ಇಂದಿನಿಂದ ಸರಣಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಅನೇಕ ನಿರ್ಮಾಪಕರು ಧರಣಿ ನಡೆಸುತ್ತಿದ್ದಾರೆ. [ಅಂಬಿ ಮಾತಿಗೆ 'ಇವರಿಂದ' ಕವಡೆ ಕಾಸಿನ ಕಿಮ್ಮತ್ತಿಲ್ಲ]
ಅಲ್ಲದೇ, ಇಂದು ಸಂಜೆ ಫಿಲ್ಮ್ ಚೇಂಬರ್ ನ ಇತರೆ ಅಂಗ ಸಂಸ್ಥೆಗಳೊಂದಿಗೆ ಸಭೆ ಕೂಡ ನಡೆಸಲಿದ್ದಾರೆ. ಜೂನ್ 12 ನೇ ತಾರೀಖು ನಿರ್ಮಾಪಕರ ಬೃಹತ್ ಸಭೆ ಕೂಡ ಹಮ್ಮಿಕೊಳ್ಳಲಾಗಿದೆ. ನಿರ್ಮಾಪಕರ ಸಮಸ್ಯೆ ಬಗ್ಗೆ ಚರ್ಚಿಸುವುದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಸಭೆ ನಡೆಸಿದರೂ, ಯಾವುದೇ ನಿರ್ಧಾರಕ್ಕೆ ಬಾರದೆ, ಸಭೆ ವಿಫಲವಾಗಿತ್ತು. [''ರೆಬೆಲ್ ಸ್ಟಾರ್ ಅಂಬರೀಶ್ ಗೆ ಧಿಕ್ಕಾರ...ಧಿಕ್ಕಾರ...'']
ಸತ್ಯಾಗ್ರಹ ಯಾಕೆ? - ಖಾಸಗಿ ವಾಹಿನಿಗಳು ಕನ್ನಡ ಚಿತ್ರಗಳ ಸ್ಯಾಟೆಲೈಟ್ ಹಕ್ಕುಗಳನ್ನ ಪಡೆಯುತ್ತಿಲ್ಲ. ಹೀಗಿದ್ದರೂ, ಅದೇ ಖಾಸಗಿ ವಾಹಿನಿಗಳಲ್ಲಿ ಸ್ಟಾರ್ ಹೀರೋಗಳು ರಿಯಾಲಿಟಿ ಶೋ ನಡೆಸಿಕೊಡುತ್ತಾರೆ. ಶೋಗಳಲ್ಲಿ ಬಿಜಿಯಿರುವ ಸ್ಟಾರ್ ಗಳು ಕಾಲ್ ಶೀಟ್ ಕೂಡ ನೀಡುವುದಿಲ್ಲ. ನಿರ್ಮಾಪಕರು ಲಾಸ್ ನಲ್ಲಿದ್ದಾರೆ. ಪ್ರೊಡ್ಯೂಸರ್ ಗಳ ಕಷ್ಟಕ್ಕೆ ಕಲಾವಿದರು ಸ್ಪಂದಿಸುತ್ತಿಲ್ಲ ಅಂತ ನಿರ್ಮಾಪಕರ ಸಂಘ ಜೂನ್ 1 ರಿಂದ ಪ್ರತಿಭಟನೆ ನಡೆಸುತ್ತಿದೆ.