Don't Miss!
- News ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದೇನು?
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೈಕೊಟ್ಟ ಪ್ರಾಜೆಕ್ಟರ್,ಚಿತ್ರಮಂದಿರದಲ್ಲಿ ಪ್ರೇಕ್ಷಕರ ದಾಂಧಲೆ
ಜಿಪಿನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಉಪೇಂದ್ರ ಅಭಿನಯದ ಕಲ್ಪನ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿರಿದು ತುಂಬಿದ್ದರು. ಚಿತ್ರ ಕ್ಲೈಮ್ಯಾಕ್ಸ್ ಹತ್ತಿರ ಬರುತ್ತಿದ್ದಂತೆಯೇ ಪ್ರಾಜೆಕ್ಟರ್ ಕೈಕೊಟ್ಟಿತ್ತು. ಸಹನೆ ಕಳೆದುಕೊಂಡ ಅಭಿಮಾನಿಗಳು ಚಿತ್ರಮಂದಿರದ ಗ್ಲಾಸ್, ಕುರ್ಚಿಗಳಿಗೆ ಹಾನಿ ಮಾಡಿದ್ದಾರೆ.
ಚಿತ್ರಮಂದಿರದ ಆಡಳಿತ ಮಂಡಳಿ ಪರಿ ಪರಿಯಾಗಿ ವಿನಂತಿಸಿದ ನಂತರ ಪ್ರಾಜೆಕ್ಟರ್ ನಲ್ಲಾದ ತಾಂತ್ರಿಕ ತೊಂದರೆ ಸರಿಪಡಿಸಿ ಕೊನೆಯ ಹತ್ತು ನಿಮಿಷವನ್ನು ಮತ್ತೆ ಪ್ರಸಾರ ಮಾಡುವಷ್ಟರಲ್ಲಿ ಚಿತ್ರಮಂದಿರದ ಸಿಬ್ಬಂದಿಗಳು ಹೈರಾಣವಾಗಿ ಹೋಗಿದ್ದರು.
ಶನಿವಾರ (ಸೆ 29) ರಾತ್ರಿಯ ಪ್ರದರ್ಶನದ ವೇಳೆ ಈ ಘಟನೆ ನಡೆದಿದೆ.
ಈ ಮಧ್ಯೆ, ಮಾಧ್ಯಮಗಳ ಮಿಶ್ರ ಪ್ರತಿಕ್ರಿಯೆಯ ನಡುವೆ ಕಲ್ಪನ ಚಿತ್ರ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಎಂದಿನ ಉಪೇಂದ್ರ ಚಿತ್ರದಂತೆ ಈ ಚಿತ್ರದಲ್ಲೂ ಅವರ ಸಂಭಾಷಣೆಗೆ ಜನ ಮನಸೋತಿದ್ದಾರೆ.
ನಿರ್ದೇಶಕ ರಾಮ್ ನಾರಾಯಣ್ ಚಿತ್ರಕಥೆ, ನಿರ್ದೇಶನದ ಜೊತೆಗೆ ಚಿತ್ರದ ನಿರ್ಮಾಪಕರೂ ಆಗಿರುವುದು ವಿಶೇಷ. ಮೂಲ ಕಥೆಯನ್ನು ಕೆಡಿಸದೇ ರಿಮೇಕ್ ಮಾಡಿ ಕನ್ನಡದಲ್ಲಿ ರಾಮ್ ನಾರಾಯಣ್ ತೆರೆಗೆ ತಂದಿದ್ದಾರೆ.