Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಬ್ಲಿಕ್ ಟಿವಿ ವಿರುದ್ಧ ನಟ ರಕ್ಷಿತ್ ಶೆಟ್ಟಿ ಕೆಂಡಾಮಂಡಲ
ಕನ್ನಡ ಖಾಸಗಿ ಸುದ್ದಿ ವಾಹಿನಿ ಪಬ್ಲಿಕ್ ಟಿವಿಯು ತಮ್ಮ ವಿರುದ್ಧ ಅವಹೇಳನಕಾರಿ ಸುದ್ದಿಯನ್ನು ಪ್ರಕಟಿಸಿದೆ ಎಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಆರೋಪಿಸಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಕುರಿತು ಪಬ್ಲಿಕ್ ಟಿವಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮವೊಂದು ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ವೈಯಕ್ತಿಕ ಜೀವನದ ಬಗ್ಗೆ, ವೃತ್ತಿ ಜೀವನದ ಬಗ್ಗೆ ಆಧಾರರಹಿತವಾದ, ಅವಹೇಳನಕಾರಿ ಎನ್ನಬಹುದಾದ ವರದಿಗಳನ್ನು ಬಿತ್ತರಿಸಲಾಗಿತ್ತು ಎಂಬುದು ಆರೋಪವಾಗಿದೆ.
ಈ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ರಕ್ಷಿತ್ ಶೆಟ್ಟಿ, ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಪ್ರಕಟಿಸಿದ್ದು, ''ಪಬ್ಲಿಕ್ ಟಿವಿಯವರು ನನ್ನ ವಿರುದ್ಧ ಕಳೆದ ಎರಡು ವರ್ಷಗಳಲ್ಲಿ ಇಂಥಹಾ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅವರ ಎಲ್ಲ ತೇಜೋವಧೆ ಯತ್ನಗಳನ್ನು ನಾನು ನಿರ್ಲಕ್ಷಿಸುತ್ತಾ ಬಂದಿದ್ದೆ. ಇದಕ್ಕೆಲ್ಲ ನನ್ನ ಕೆಲಸವೇ ಉತ್ತರ ಕೊಡುತ್ತದೆ ಎಂಬುದು ನನ್ನ ನಂಬಿಕೆ ಆಗಿತ್ತು'' ಎಂದಿದ್ದಾರೆ.
''ಈಗ ಮತ್ತೊಮ್ಮೆ ಈ ಸುದ್ದಿ ವಾಹಿನಿಯು ಮಾಧ್ಯಮದ ನೈತಿಕ ಜವಾಬ್ದಾರಿ ಮರೆತು ವೈಯಕ್ತಿಕ ದಾಳಿ ನಡೆಸಿ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನ ಮಾಡಿದ್ದಾರೆ. ಈ ಬಾರಿ ಇದನ್ನು ನಿರ್ಲಕ್ಷಿಸಲು ಮನಸ್ಸಾಗುತ್ತಿಲ್ಲ. ಇದಕ್ಕೆ ಸೂಕ್ತ ಉತ್ತರವನ್ನು ಜುಲೈ 11 ರಂದು ನೀಡುತ್ತೇನೆ'' ಎಂದಿದ್ದಾರೆ.
Recommended Video
''ಅಲ್ಲಿಯವರೆಗೆ ನಾನು ಕೆಲಸ ಮಾಡಿದ ಪ್ರತಿಯೊಂದು ಸಿನಿಮಾದ ಕುರಿತು, ನನ್ನ ಕೆಲಸದ ಕುರಿತು ಯಾವ-ಯಾವ ಸತ್ಯಗಳು ಹೊರಗೆ ಬರುತ್ತದೆಯೋ ಅದಕ್ಕೆ ಸಂಬಂಧಪಟ್ಟವರಿಂದಲೇ ಹೊರಗೆ ಬರಲಿ. ನಾನು ಕಾಯುತ್ತೇನೆ. ನನ್ನ ಉತ್ತರವನ್ನು ಜುಲೈ 11 ಕ್ಕೆ ನೀಡುತ್ತೇನೆ. ಕಾದು ನೋಡಿ'' ಎಂದು ಸವಾಲೆಸೆದಿದ್ದಾರೆ ರಕ್ಷಿತ್ ಶೆಟ್ಟಿ.