Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಳೆಯದಳಪತಿ 'ಪುಲಿ' ನೋಡಲು 12 ಗಂಟೆ ತನಕ ಕಾಯಿರಿ
'ಪುಲಿ' ಚಿತ್ರ ನೋಡಲು ಕಾದು ಕುಳಿತಿದ್ದ ವಿಜಯ್ ಅಭಿಮಾನಿಗಳಿಗೆ ಗುರುವಾರ ಬೆಳ್ಳಂಬೆಳಗ್ಗೆ ನಿರಾಸೆಯಾಗಿದೆ. ಇದಕ್ಕೆ ಕಾರಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು. ತಮಿಳಿನ ಖ್ಯಾತ ನಟ ವಿಜಯ್ ಅವರ ನಿವಾಸದ ಮೇಲೆ ನಡೆದ ಐಟಿ ದಾಳಿ ಪುಲಿ ಚಿತ್ರದ ಮೇಲೆಯೂ ಪ್ರಭಾವ ಬೀರಿದ್ದು ಇಂದು ವಿಶ್ವದಾದ್ಯಂತ ಬೆಳಗಿನ ಪ್ರದರ್ಶನ ರದ್ದಾಗಿದೆ.['ಪುಲಿ' ವಿಜಯ್, ಸಮಂತಾ ಮನೆ ಮೇಲೆ ಐಟಿ ದಾಳಿ ಏಕೆ?]
ಗುರುವಾರ ಬೆಳಗ್ಗೆ ಸಹ ವಿಜಯ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂಬ ಸುದ್ದಿಯೂ ಹಬ್ಬಿದೆ. ಆದ್ದರಿಂದ, ವಿತರಕರು ಆತಂಕಗೊಂಡಿದ್ದು, ಪುಲಿ ಬಿಡುಗಡೆಗೊಂಡಿಲ್ಲ. ಚಿತ್ರ ನೋಡಲು ಕಾದು ಕುಳಿತಿದ್ದ ಅಭಿಮಾನಿಗಳು ಚಿತ್ರ ಮಂದಿರದ ಮೇಲೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
'ಪುಲಿ' ಚಿತ್ರ ಬಿಡುಗಡೆಯಾಗುವ ಈ ಸಂದರ್ಭದಲ್ಲಿಯೇ ಏಕೆ ನಮ್ಮ ನೆಚ್ಚಿನ ನಾಯಕನನ್ನು ಟಾರ್ಗೆಟ್ ಮಾಡುತ್ತಿದ್ದೀರಿ? ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡುವವರು ಯಾರು?. ತಮಿಳುನಾಡು, ಕರ್ನಾಟಕ ಸೇರಿದಂತೆ ವಿಶ್ವದಾದ್ಯಂತ ಪುಲಿ ಬೆಳಗ್ಗೆಯ ಪ್ರದರ್ಶನ ರದ್ದಾಗಿದೆ.
ನೆಚ್ಚಿನ ನಟನ ಚಿತ್ರ ತೆರೆ ಕಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅಭಿಮಾನಿಗಳು ಕೃಷ್ಣಗಿರಿ, ಸೇಲಂ ಜಿಲ್ಲೆಯಲ್ಲಿ ಥಿಯೇಟರ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮಧ್ಯಾಹ್ನ 12 ಗಂಟೆಯ ನಂತರ ಇಂದು ಚಿತ್ರ ಬಿಡುಗಡೆಯಾಗುವ ಬಗ್ಗೆ ಅಂತಿಮ ನಿರ್ಧಾರ ಪ್ರಕಟಗೊಳ್ಳಲಿದೆ. ['ಪುಲಿ' ಏಕೆ ನೋಡಬೇಕು, ಇಲ್ಲಿದೆ ಟಾಪ್ 10 ಕಾರಣಗಳು]
ಈ ನಡುವೆ ಟ್ವೀಟ್ ಮಾಡಿರುವ ತಮಿಳು ನಟ ಶರತ್ ಕುಮಾರ್ ಅವರು ಆಂಧ್ರಪ್ರದೇಶ ಹೊರತುಪಡಿಸಿ ಉಳಿದ ಕಡೆ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಿದ್ದು, ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.
Congrats
for
the
release
great
effort
by
vijay
and
my
friends
in
the
producer's
council,
release
except
in
andhra
,
great
feast
to
the
fans
—
R
Sarath
Kumar
(@realsarathkumar)
October
1,
2015
ಬುಧವಾರ ನಟ ವಿಜಯ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಗುರುವಾರವೂ ದಾಳಿ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ನಿರ್ದೇಶಕ ಚೆಂಬುದೇವನ್ ಅವರು ಆಕ್ಷನ್-ಕಟ್ ಹೇಳಿರುವ 'ಪುಲಿ' ಚಿತ್ರವನ್ನು ನೋಡಲು ಕಾತರರಾಗಿರುವ ಅಭಿಮಾನಿಗಳು ಮಧ್ಯಾಹ್ನ 12 ಗಂಟೆಯವರೆಗೂ ಕಾಯಬೇಕಾಗಿರುವುದು ಅನಿವಾರ್ಯ....
Puli
releasing
as
scheduled
good
news
to
all
the
fans
and
well
wishers
a
personal
thanks
to
Vijay
for
helping
the
producer
to
overcome
this
—
R
Sarath
Kumar
(@realsarathkumar)
October
1,
2015